ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ ಭಾಗದಲ್ಲಿ ಓಡಾಡುವ ಸಾರ್ವಜನಿಕರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.
ಈ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದಿರುವುದು ಕುಡುಕರಿಗೆ ವರದಾನವಾಗಿದೆ. ಕುವೆಂಪು ನಗರದ ಐ ಬ್ಲಾಕ್ ಸಮೀಪದಲ್ಲೇ ಅಶೋಕಪುರಂ ಪೊಲೀಸ್ ಠಾಣೆ ಇದ್ದರೂ, ಇವರಿಗೆ ಯಾವ ಪೊಲೀಸರ ಭಯವೂ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಲವು ಸಭ್ಯರೆನಿಸಿಕೊಂಡವರೂ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಕುಳಿತು ರಾಜಾರೋಷವಾಗಿ ಮದ್ಯಪಾನ ಮಾಡುವ ಮೂಲಕ ಅನಾಗರಿಕರಂತೆ ವರ್ತಿಸುತ್ತಿದ್ದಾರೆ.
ಮೈಸೂರು ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯಿದ್ದರೂ ಕಡುಕರ ಹಾವಳಿ ಮಿತಿ ಮೀರಿದೆ. ಇದು ಕೇವಲ ಕುವೆಂಪು ನಗರದ ಸಮಸ್ಯೆಯಲ್ಲ, ಮೈಸೂರಿನ ಬಹುತೇಕ ಪಾರ್ಕ್ಗಳಲ್ಲಿ ಮತ್ತು ಬೀದಿ ದೀಪಗಳು ಇಲ್ಲದ ಕಡೆಗಳಲ್ಲಿ ಈ ರೀತಿಯ ಸಮಸ್ಯೆ ಸಾಮಾನ್ಯವಾಗಿದೆ. ರಾತ್ರಿ ವೇಳೆ ಕುಡಿದು ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿರುವ ಮದ್ಯವ್ಯಸನಿಗಳ ಹಾವಳಿಗೆ ನಗರದ ಪೊಲೀಸ್ ಕಮಿಷನರ್ ರವರು ಕಡಿವಾಣ ಹಾಕುವುದು ಅಗತ್ಯವಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…