Andolana originals

ಓದುಗರ ಪತ್ರ: ಕುವೆಂಪು ನಗರದಲ್ಲಿ ಕುಡುಕರ ಹಾವಳಿ ತಪ್ಪಿಸಿ

ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್‌ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ ಭಾಗದಲ್ಲಿ ಓಡಾಡುವ ಸಾರ್ವಜನಿಕರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಈ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದಿರುವುದು ಕುಡುಕರಿಗೆ ವರದಾನವಾಗಿದೆ. ಕುವೆಂಪು ನಗರದ ಐ ಬ್ಲಾಕ್ ಸಮೀಪದಲ್ಲೇ ಅಶೋಕಪುರಂ ಪೊಲೀಸ್ ಠಾಣೆ ಇದ್ದರೂ, ಇವರಿಗೆ ಯಾವ ಪೊಲೀಸರ ಭಯವೂ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಲವು ಸಭ್ಯರೆನಿಸಿಕೊಂಡವರೂ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಕುಳಿತು ರಾಜಾರೋಷವಾಗಿ ಮದ್ಯಪಾನ ಮಾಡುವ ಮೂಲಕ ಅನಾಗರಿಕರಂತೆ ವರ್ತಿಸುತ್ತಿದ್ದಾರೆ.

ಮೈಸೂರು ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯಿದ್ದರೂ ಕಡುಕರ ಹಾವಳಿ ಮಿತಿ ಮೀರಿದೆ. ಇದು ಕೇವಲ ಕುವೆಂಪು ನಗರದ ಸಮಸ್ಯೆಯಲ್ಲ, ಮೈಸೂರಿನ ಬಹುತೇಕ ಪಾರ್ಕ್‌ಗಳಲ್ಲಿ ಮತ್ತು ಬೀದಿ ದೀಪಗಳು ಇಲ್ಲದ ಕಡೆಗಳಲ್ಲಿ ಈ ರೀತಿಯ ಸಮಸ್ಯೆ ಸಾಮಾನ್ಯವಾಗಿದೆ. ರಾತ್ರಿ ವೇಳೆ ಕುಡಿದು ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿರುವ ಮದ್ಯವ್ಯಸನಿಗಳ ಹಾವಳಿಗೆ ನಗರದ ಪೊಲೀಸ್ ಕಮಿಷನರ್ ರವರು ಕಡಿವಾಣ ಹಾಕುವುದು ಅಗತ್ಯವಾಗಿದೆ.

 – ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

22 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

22 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

22 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

22 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

22 hours ago