ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ ಭಾಗದಲ್ಲಿ ಓಡಾಡುವ ಸಾರ್ವಜನಿಕರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.
ಈ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದಿರುವುದು ಕುಡುಕರಿಗೆ ವರದಾನವಾಗಿದೆ. ಕುವೆಂಪು ನಗರದ ಐ ಬ್ಲಾಕ್ ಸಮೀಪದಲ್ಲೇ ಅಶೋಕಪುರಂ ಪೊಲೀಸ್ ಠಾಣೆ ಇದ್ದರೂ, ಇವರಿಗೆ ಯಾವ ಪೊಲೀಸರ ಭಯವೂ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಲವು ಸಭ್ಯರೆನಿಸಿಕೊಂಡವರೂ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಕುಳಿತು ರಾಜಾರೋಷವಾಗಿ ಮದ್ಯಪಾನ ಮಾಡುವ ಮೂಲಕ ಅನಾಗರಿಕರಂತೆ ವರ್ತಿಸುತ್ತಿದ್ದಾರೆ.
ಮೈಸೂರು ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯಿದ್ದರೂ ಕಡುಕರ ಹಾವಳಿ ಮಿತಿ ಮೀರಿದೆ. ಇದು ಕೇವಲ ಕುವೆಂಪು ನಗರದ ಸಮಸ್ಯೆಯಲ್ಲ, ಮೈಸೂರಿನ ಬಹುತೇಕ ಪಾರ್ಕ್ಗಳಲ್ಲಿ ಮತ್ತು ಬೀದಿ ದೀಪಗಳು ಇಲ್ಲದ ಕಡೆಗಳಲ್ಲಿ ಈ ರೀತಿಯ ಸಮಸ್ಯೆ ಸಾಮಾನ್ಯವಾಗಿದೆ. ರಾತ್ರಿ ವೇಳೆ ಕುಡಿದು ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿರುವ ಮದ್ಯವ್ಯಸನಿಗಳ ಹಾವಳಿಗೆ ನಗರದ ಪೊಲೀಸ್ ಕಮಿಷನರ್ ರವರು ಕಡಿವಾಣ ಹಾಕುವುದು ಅಗತ್ಯವಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…