ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್ ಹತ್ತಲು ಪರದಾಡುವಂತಾಗಿದೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಈ ಆಟೋ ನಿಲ್ದಾಣದ ಬಳಿ ಸರ್ಕಾರಿ ಬಸ್ಗಳನ್ನೂ ನಿಲುಗಡೆ ಮಾಡುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಈ ಕೆಸರಿನ ನಡುವೆಯೇ ನಿಂತು ಬಸ್ ಹತ್ತಬೇಕಿದೆ. ಅಲ್ಲದೆ ಬಸ್ ಹತ್ತುವ ಬರದಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಜಾರಿ ಬಿದ್ದಿರುವ ಉದಾಹರಣೆಗಳೂ ಇವೆ. ಈ ನಿಲ್ದಾಣದ ಸಮೀಪದಲ್ಲಿಯೇ ರಾಜಕಾಲುವೆಯೂ ಇದ್ದು, ಅದು ಕಟ್ಟಿಕೊಂಡಿದೆ. ಇನ್ನು ಇಲ್ಲಿ ಸಂಗ್ರಹವಾಗುತ್ತಿರುವ ಕೆಸರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಪ್ರಯಾಣಿಕರಿಗೆ ಹಾಗೂ ಆಟೋ ಚಾಲಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಆಟೋ ನಿಲ್ದಾಣದ ಬಳಿ ನೀರು ನಿಲ್ಲದಂತೆ ಮಾಡಬೇಕಿದೆ.
– ಶಂಭು ಶಾಖ್ಯ, ಅಂತರಸಂತೆ, ಎಚ್. ಡಿ. ಕೋಟೆ ತಾ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…