ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್ ಹತ್ತಲು ಪರದಾಡುವಂತಾಗಿದೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಈ ಆಟೋ ನಿಲ್ದಾಣದ ಬಳಿ ಸರ್ಕಾರಿ ಬಸ್ಗಳನ್ನೂ ನಿಲುಗಡೆ ಮಾಡುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಈ ಕೆಸರಿನ ನಡುವೆಯೇ ನಿಂತು ಬಸ್ ಹತ್ತಬೇಕಿದೆ. ಅಲ್ಲದೆ ಬಸ್ ಹತ್ತುವ ಬರದಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಜಾರಿ ಬಿದ್ದಿರುವ ಉದಾಹರಣೆಗಳೂ ಇವೆ. ಈ ನಿಲ್ದಾಣದ ಸಮೀಪದಲ್ಲಿಯೇ ರಾಜಕಾಲುವೆಯೂ ಇದ್ದು, ಅದು ಕಟ್ಟಿಕೊಂಡಿದೆ. ಇನ್ನು ಇಲ್ಲಿ ಸಂಗ್ರಹವಾಗುತ್ತಿರುವ ಕೆಸರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಪ್ರಯಾಣಿಕರಿಗೆ ಹಾಗೂ ಆಟೋ ಚಾಲಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಆಟೋ ನಿಲ್ದಾಣದ ಬಳಿ ನೀರು ನಿಲ್ಲದಂತೆ ಮಾಡಬೇಕಿದೆ.
– ಶಂಭು ಶಾಖ್ಯ, ಅಂತರಸಂತೆ, ಎಚ್. ಡಿ. ಕೋಟೆ ತಾ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…