ಓದುಗರ ಪತ್ರ
ಮೈಸೂರು- ಶಿವಮೊಗ್ಗ ಮಾರ್ಗದಲ್ಲಿ ಬೀರೂರು, ತರೀಕೆರೆ, ಅರಸೀಕೆರೆ ಮೊದಲಾದ ರೈಲು ನಿಲ್ದಾಣಗಳಲ್ಲಿ ನೀರು, ಬಿಸ್ಕೆಟ್, ಕುರ್ಕುರೆ, ಲೇಸ್, ಚಿಪ್ಸ್ ಮೊದಲಾದ ತಿಂಡಿ ಪ್ಯಾಕೆಟ್ಗಳಿಗೆ ದುಪ್ಪಟ್ಟು ಬೆಲೆ ಪಡೆದು ಗ್ರಾಹಕರನ್ನು ವಂಚಿಸಲಾಗುತ್ತಿದೆ. ೫ ರೂ. ಬೆಲೆಯ ಮೂಂಗ್ದಾಲ್ನ ಚಿಕ್ಕ ಪ್ಯಾಕೆಟ್ಗೆ ೧೦ ರೂ. ಪಡೆಯಲಾಗುತ್ತಿದೆ. ೧೫ ರೂ. ಮುಖಬೆಲೆಯ ನೀರಿನ ಬಾಟಲಿಗೂ ೨೦ ರೂ. ಪಡೆಯಲಾಗುತ್ತಿದೆ. ಇದರಿಂದ ದಿನ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳೂ ಹೊರತಾಗಿಲ್ಲ. ೭ ರೂ. ಬೆಲೆಯ ದಿನ ಪತ್ರಿಕೆಗಳನ್ನು ೧೦ ರೂ., ೨೫ ರೂ. ಬೆಲೆಯ ನಿಯತ ಕಾಲಿಕೆಗಳನ್ನು ೩೦ ರೂ.ಗೆ ಮಾರಾಟ ಮಾಡುತ್ತಾರೆ. ಇದನ್ನು ಪ್ರಯಾಣಿಕರು ಪ್ರಶ್ನಿಸಿದರೆ ನಾವು ಮಾರಾಟ ಮಾಡುವುದೇ ಇಷ್ಟು ಹಣಕ್ಕೆ, ಬೇಕಾದರೆ ತೆಗೆದುಕೊಳ್ಳಿ, ಇಲ್ಲದಿದ್ದರೆ ಬಿಡಿ ಎಂದು ಮಾರಾಟಗಾರರು ಉದ್ಧಟತನದಿಂದ ಉತ್ತರಿಸುತ್ತಾರೆ. ರೈಲ್ವೆ ನಿಲ್ದಾಣದಲ್ಲಿ ಹಲವಾರು ವರ್ಷಗಳಿಂದ ಈ ರೀತಿ ವಂಚನೆಯಾಗುತ್ತಿದ್ದರೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ. ಇದಕ್ಕೆ ಕಾರಣವೇನು? ಅವರಿಗೂ ಇದರಲ್ಲಿ ಪಾಲು ಸಂದಾಯವಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಯಾಣಿಕರಿಂದ ಹೆಚ್ಚು ಹಣ ಪಡೆದು ವಂಚಿಸುತ್ತಿರುವ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕಾಗಿದೆ.
– ಮಹತಿ, ಮೈಸೂರು
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…