ಓದುಗರ ಪತ್ರ
ಮೈಸೂರು- ಶಿವಮೊಗ್ಗ ಮಾರ್ಗದಲ್ಲಿ ಬೀರೂರು, ತರೀಕೆರೆ, ಅರಸೀಕೆರೆ ಮೊದಲಾದ ರೈಲು ನಿಲ್ದಾಣಗಳಲ್ಲಿ ನೀರು, ಬಿಸ್ಕೆಟ್, ಕುರ್ಕುರೆ, ಲೇಸ್, ಚಿಪ್ಸ್ ಮೊದಲಾದ ತಿಂಡಿ ಪ್ಯಾಕೆಟ್ಗಳಿಗೆ ದುಪ್ಪಟ್ಟು ಬೆಲೆ ಪಡೆದು ಗ್ರಾಹಕರನ್ನು ವಂಚಿಸಲಾಗುತ್ತಿದೆ. ೫ ರೂ. ಬೆಲೆಯ ಮೂಂಗ್ದಾಲ್ನ ಚಿಕ್ಕ ಪ್ಯಾಕೆಟ್ಗೆ ೧೦ ರೂ. ಪಡೆಯಲಾಗುತ್ತಿದೆ. ೧೫ ರೂ. ಮುಖಬೆಲೆಯ ನೀರಿನ ಬಾಟಲಿಗೂ ೨೦ ರೂ. ಪಡೆಯಲಾಗುತ್ತಿದೆ. ಇದರಿಂದ ದಿನ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳೂ ಹೊರತಾಗಿಲ್ಲ. ೭ ರೂ. ಬೆಲೆಯ ದಿನ ಪತ್ರಿಕೆಗಳನ್ನು ೧೦ ರೂ., ೨೫ ರೂ. ಬೆಲೆಯ ನಿಯತ ಕಾಲಿಕೆಗಳನ್ನು ೩೦ ರೂ.ಗೆ ಮಾರಾಟ ಮಾಡುತ್ತಾರೆ. ಇದನ್ನು ಪ್ರಯಾಣಿಕರು ಪ್ರಶ್ನಿಸಿದರೆ ನಾವು ಮಾರಾಟ ಮಾಡುವುದೇ ಇಷ್ಟು ಹಣಕ್ಕೆ, ಬೇಕಾದರೆ ತೆಗೆದುಕೊಳ್ಳಿ, ಇಲ್ಲದಿದ್ದರೆ ಬಿಡಿ ಎಂದು ಮಾರಾಟಗಾರರು ಉದ್ಧಟತನದಿಂದ ಉತ್ತರಿಸುತ್ತಾರೆ. ರೈಲ್ವೆ ನಿಲ್ದಾಣದಲ್ಲಿ ಹಲವಾರು ವರ್ಷಗಳಿಂದ ಈ ರೀತಿ ವಂಚನೆಯಾಗುತ್ತಿದ್ದರೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ. ಇದಕ್ಕೆ ಕಾರಣವೇನು? ಅವರಿಗೂ ಇದರಲ್ಲಿ ಪಾಲು ಸಂದಾಯವಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಯಾಣಿಕರಿಂದ ಹೆಚ್ಚು ಹಣ ಪಡೆದು ವಂಚಿಸುತ್ತಿರುವ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕಾಗಿದೆ.
– ಮಹತಿ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…