Andolana originals

ಓದುಗರ ಪತ್ರ:  ಸೈಬರ್ ವಂಚನೆ ಬಗೆ ಜಾಗೃತಿ ಅಗತ್ಯ

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗು ತ್ತಿದ್ದು, ವಿದ್ಯಾವಂತರೇ ವಂಚಕರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂ. ಹಣ ವನ್ನು ಕಳೆದುಕೊಳ್ಳುತ್ತಿದ್ದಾರೆ.

ನೀವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದೀರಿ, ಅದಕ್ಕಾಗಿ ನಿಮ್ಮನ್ನು ‘ಡಿಜಿಟಲ್ ಅರೆಸ್ಟ್’ ಮಾಡಲಾಗಿದೆ ಎಂದು ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡುವ ವಂಚಕರು, ಅಮಾಯಕರನ್ನು ತಮ್ಮ ಜಾಲಕ್ಕೆ ಸಿಲುಕಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇಂತಹ ಸೈಬರ್ ವಂಚಕರನ್ನು ಸೆರೆ ಹಿಡಿಯಲೆಂದೇ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಸೈಬರ್ ವಂಚನೆಯ ಬಗ್ಗೆ ಪೊಲೀಸ್ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ್, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಇನ್ನಿತರ ಸಂಘ ಸಂಸ್ಥೆಗಳು ಸಾಕಷ್ಟು ತಿಳಿವಳಿಕೆ ನೀಡುತ್ತಿದ್ದರೂ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗಿಲ್ಲ.

ಇನ್ನು ಮುಂದಾದರೂ ನಾಗರಿಕರು ಸೈಬರ್ ವಂಚನೆಯ ಸಣ್ಣ ಸುಳಿವು ಸಿಕ್ಕರೂ, ಎಚ್ಚೆತ್ತುಕೊಂಡು ಸೈಬರ್ ಠಾಣೆ ಅಥವಾ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಬಹುಮುಖ್ಯವಾಗಿ ಅನಾಮಧೇಯ ಕರೆಗಳನ್ನು ಸ್ವೀಕರಿಸುವಾಗ ಬಹಳಷ್ಟು ಎಚ್ಚರಿಕೆ ವಹಿಸಬೇಕು. ವಂಚನೆಯ ಸುಳಿವು ಸಿಕ್ಕರೆ ಕರೆಯನ್ನು ಸ್ಥಗಿತಗೊಳಿಸಿ, ಆ ನಂಬರ್‌ಅನ್ನು ತಕ್ಷಣ ಬ್ಲಾಕ್ ಮಾಡುವ ಮೂಲಕ ವಂಚಕರ ಬಲೆಯಿಂದ ತಪ್ಪಿಸಿಕೊಳ್ಳಬಹುದು.

-ಕೆ.ವಿ.ವಾಸು, ವಿವೇಕಾನಂದನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

10 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

11 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

12 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

13 hours ago