ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗು ತ್ತಿದ್ದು, ವಿದ್ಯಾವಂತರೇ ವಂಚಕರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂ. ಹಣ ವನ್ನು ಕಳೆದುಕೊಳ್ಳುತ್ತಿದ್ದಾರೆ.
ನೀವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದೀರಿ, ಅದಕ್ಕಾಗಿ ನಿಮ್ಮನ್ನು ‘ಡಿಜಿಟಲ್ ಅರೆಸ್ಟ್’ ಮಾಡಲಾಗಿದೆ ಎಂದು ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡುವ ವಂಚಕರು, ಅಮಾಯಕರನ್ನು ತಮ್ಮ ಜಾಲಕ್ಕೆ ಸಿಲುಕಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇಂತಹ ಸೈಬರ್ ವಂಚಕರನ್ನು ಸೆರೆ ಹಿಡಿಯಲೆಂದೇ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಸೈಬರ್ ವಂಚನೆಯ ಬಗ್ಗೆ ಪೊಲೀಸ್ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ್, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಇನ್ನಿತರ ಸಂಘ ಸಂಸ್ಥೆಗಳು ಸಾಕಷ್ಟು ತಿಳಿವಳಿಕೆ ನೀಡುತ್ತಿದ್ದರೂ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗಿಲ್ಲ.
ಇನ್ನು ಮುಂದಾದರೂ ನಾಗರಿಕರು ಸೈಬರ್ ವಂಚನೆಯ ಸಣ್ಣ ಸುಳಿವು ಸಿಕ್ಕರೂ, ಎಚ್ಚೆತ್ತುಕೊಂಡು ಸೈಬರ್ ಠಾಣೆ ಅಥವಾ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಬಹುಮುಖ್ಯವಾಗಿ ಅನಾಮಧೇಯ ಕರೆಗಳನ್ನು ಸ್ವೀಕರಿಸುವಾಗ ಬಹಳಷ್ಟು ಎಚ್ಚರಿಕೆ ವಹಿಸಬೇಕು. ವಂಚನೆಯ ಸುಳಿವು ಸಿಕ್ಕರೆ ಕರೆಯನ್ನು ಸ್ಥಗಿತಗೊಳಿಸಿ, ಆ ನಂಬರ್ಅನ್ನು ತಕ್ಷಣ ಬ್ಲಾಕ್ ಮಾಡುವ ಮೂಲಕ ವಂಚಕರ ಬಲೆಯಿಂದ ತಪ್ಪಿಸಿಕೊಳ್ಳಬಹುದು.
-ಕೆ.ವಿ.ವಾಸು, ವಿವೇಕಾನಂದನಗರ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…