Andolana originals

ಓದುಗರ ಪತ್ರ| ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತಿ ಅಗತ್ಯ

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 68,450 ಎಚ್‌ಐವಿ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕರ್ನಾಟಕವನ್ನು ಎಚ್‌ಐವಿ ಮುಕ್ತ ರಾಜ್ಯವನ್ನಾಗಿಸಬೇಕು ಎಂದು ಸರ್ಕಾರ ಸೋಂಕಿನ ನಿಯಂತ್ರಣಕ್ಕೆ ಎಷ್ಟೇ ಜಾಗೃತಿ ಮೂಡಿಸಿದರೂ ವರ್ಷದಿಂದ ವರ್ಷಕ್ಕೆ ಎಚ್ ಐವಿ ಪ್ರಕರಣಗಳು ಹೆಚ್ಚಾಗುತ್ತಿವೆ.

1986ರಲ್ಲಿ ದೇಶದಲ್ಲಿ ಮೊದಲ ಎಚ್‌ಐವಿ ಸೋಂಕು ಪತ್ತೆಯಾಗಿತ್ತು. ಅದೇ ಸಂದರ್ಭದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮವಹಿಸಿ ಜನರಲ್ಲಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದ್ದಲ್ಲಿ ಇಂದು ಇಷ್ಟರ ಮಟ್ಟಿಗೆ ಈ ಸೋಂಕು ಹರಡುತ್ತಿರಲಿಲ್ಲ.

ವಿಶ್ವದ ಎಚ್‌ಐವಿ ಸೋಂಕಿತ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದಲ್ಲಿದ್ದು, ಕರ್ನಾಟಕದಲ್ಲಿಯೇ 2.28 ಲಕ್ಷ ಮಂದಿ ಸೋಂಕಿತರಿರು ವುದು ಆಘಾತಕರ ಸಂಗತಿ.

ಲೈಂಗಿಕ ಕ್ರಿಯೆ ವೇಳೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿದರೆ ಈ ಸೋಂಕನ್ನು ತಡೆಗಟ್ಟಬಹುದು ಎಂದು ಸರ್ಕಾರ ಎಷ್ಟೇ ಜಾಗೃತಿ ಮೂಡಿಸಿದರೂ, ಎಚ್‌ಐವಿ ಸೋಂಕಿನಿಂದ ಗುಣಮುಖರಾಗಲು ಯಾವುದೇ ಔಷಧ ಲಭ್ಯವಿಲ್ಲ ಎಂದು ಜನರಿಗೆ ಮನದಟ್ಟು ಮಾಡಿಸಿದ್ದರೂ ಜನರು ಎಚ್ಚೆತುಕೊಳ್ಳುತ್ತಿಲ್ಲ. ಇನ್ನು ಮುಂದಾದರೂ ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತರಾಗಿ ಸೋಂಕಿನ ನಿಯಂತ್ರಣಕ್ಕೆ ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸಬೇಕಿದೆ.

-ಹೊ.ನಂ. ಅಂಕರಾಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago