ಓದುಗರ ಪತ್ರ
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ ನುಡಿ ಅತ್ಯಂತ ಪ್ರಸ್ತುತವಾಗಿದೆ.
ಜಾತೀಯತೆಯ ಅಟ್ಟಹಾಸವು ಆಧುನಿಕ ಕಾಲಘಟ್ಟದಲ್ಲಿ ಮೀಸಲಾತಿಯ ಕಲಸುಮೇಲೋಗರ, ಬಾಡಿಗೆ ಮನೆ ಕೊಡದಿರುವುದು… ಹೀಗೆ ಹೊಸ ಬಗೆಯ ಪೋಷಾಕಿನಲ್ಲಿ ದಲಿತರು, ಅಸ್ಪ ಶ್ಯರ ಕತ್ತು ಹಿಸುಕುತ್ತಿದೆ. ಸಂವಿಧಾನ ಮತ್ತು ಅದರಿಂದ ನಿರ್ದೇಶಿತವಾದ ಹಕ್ಕುಗಳಿಗೆ ವ್ಯತಿರಿಕ್ತ ಅರ್ಥಗಳನ್ನು ಕೊಡುವ ಯತ್ನವನ್ನು ಕೆಲ ಜಾತಿವಾದಿ ಮನಸ್ಸಗಳು ನಿರಂತವಾಗಿ ಮಾಡುತ್ತಿವೆ. ಅದಕ್ಕೆ ಅಸ್ಪೃಶ್ಯರನ್ನೇ ಬಳಸಿ ಕೊಳ್ಳುವ ಹುನ್ನಾರ ಕೂಡ ನಡೆಯುತ್ತಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ನೈಜತೆಯನ್ನು ಪ್ರದರ್ಶಿಸುವ ನೆಪದಲ್ಲಿ ಜಾತಿವಾದವನ್ನು ಸಮರ್ಥಿಸಿಕೊಳ್ಳುವಂತಹ ಹುನ್ನಾರಗಳು ನಡೆಯುತ್ತಿವೆ. ಅಂಬೇಡ್ಕರ್ ಜಾತಿವಾದ, ಎಲ್ಲ ಧರ್ಮಗಳ ಮೌಢ್ಯವನ್ನು ವಿರೋಧಿಸಿದವರು, ಜೀವನದಲ್ಲಿ ಅದನ್ನು ಅಳವಡಿಸಿಕೊಂಡಿದ್ದವರು. ಅದನ್ನು ಯಥಾವತ್ತಾಗಿ ಜನರಿಗೆ ಮುಟ್ಟಿಸುವಂತಹ ನಿಟ್ಟಿನಲ್ಲಿ ಬಹುರೂಪಿ ದಿಟ್ಟ ಹೆಜ್ಜೆ ಇಟ್ಟಿದೆ ಅನಿಸುತ್ತಿದೆ. ಅಂಬೇಡ್ಕರ್ ಅವರು ಕಂಡ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕನಸನ್ನು ಈಡೇರಿಸುವುದರ ಭಾಗವಾಗಿ ಬಹುರೂಪಿ ನಾಟಕೋತ್ಸವ ರೂಪಿತವಾಗಿದ್ದರೆ, ಅದು ಹೆಚ್ಚು ಅರ್ಥಪೂರ್ಣ.
-ಎಸ್.ದೀಕ್ಷನ್, ನಂಜನಗೂಡು
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…
ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…
ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…