Andolana originals

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ ನುಡಿ ಅತ್ಯಂತ ಪ್ರಸ್ತುತವಾಗಿದೆ.

ಜಾತೀಯತೆಯ ಅಟ್ಟಹಾಸವು ಆಧುನಿಕ ಕಾಲಘಟ್ಟದಲ್ಲಿ ಮೀಸಲಾತಿಯ ಕಲಸುಮೇಲೋಗರ, ಬಾಡಿಗೆ ಮನೆ ಕೊಡದಿರುವುದು… ಹೀಗೆ ಹೊಸ ಬಗೆಯ ಪೋಷಾಕಿನಲ್ಲಿ ದಲಿತರು, ಅಸ್ಪ ಶ್ಯರ ಕತ್ತು ಹಿಸುಕುತ್ತಿದೆ. ಸಂವಿಧಾನ ಮತ್ತು ಅದರಿಂದ ನಿರ್ದೇಶಿತವಾದ ಹಕ್ಕುಗಳಿಗೆ ವ್ಯತಿರಿಕ್ತ ಅರ್ಥಗಳನ್ನು ಕೊಡುವ ಯತ್ನವನ್ನು ಕೆಲ ಜಾತಿವಾದಿ ಮನಸ್ಸಗಳು ನಿರಂತವಾಗಿ ಮಾಡುತ್ತಿವೆ. ಅದಕ್ಕೆ ಅಸ್ಪೃಶ್ಯರನ್ನೇ ಬಳಸಿ ಕೊಳ್ಳುವ ಹುನ್ನಾರ ಕೂಡ ನಡೆಯುತ್ತಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ನೈಜತೆಯನ್ನು ಪ್ರದರ್ಶಿಸುವ ನೆಪದಲ್ಲಿ ಜಾತಿವಾದವನ್ನು ಸಮರ್ಥಿಸಿಕೊಳ್ಳುವಂತಹ ಹುನ್ನಾರಗಳು ನಡೆಯುತ್ತಿವೆ. ಅಂಬೇಡ್ಕರ್ ಜಾತಿವಾದ, ಎಲ್ಲ ಧರ್ಮಗಳ ಮೌಢ್ಯವನ್ನು ವಿರೋಧಿಸಿದವರು, ಜೀವನದಲ್ಲಿ ಅದನ್ನು ಅಳವಡಿಸಿಕೊಂಡಿದ್ದವರು. ಅದನ್ನು ಯಥಾವತ್ತಾಗಿ ಜನರಿಗೆ ಮುಟ್ಟಿಸುವಂತಹ ನಿಟ್ಟಿನಲ್ಲಿ ಬಹುರೂಪಿ ದಿಟ್ಟ ಹೆಜ್ಜೆ ಇಟ್ಟಿದೆ ಅನಿಸುತ್ತಿದೆ. ಅಂಬೇಡ್ಕರ್ ಅವರು ಕಂಡ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕನಸನ್ನು ಈಡೇರಿಸುವುದರ ಭಾಗವಾಗಿ ಬಹುರೂಪಿ ನಾಟಕೋತ್ಸವ ರೂಪಿತವಾಗಿದ್ದರೆ, ಅದು ಹೆಚ್ಚು ಅರ್ಥಪೂರ್ಣ.

-ಎಸ್.ದೀಕ್ಷನ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

39 mins ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

40 mins ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

43 mins ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

46 mins ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

50 mins ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

55 mins ago