Andolana originals

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ ನುಡಿ ಅತ್ಯಂತ ಪ್ರಸ್ತುತವಾಗಿದೆ.

ಜಾತೀಯತೆಯ ಅಟ್ಟಹಾಸವು ಆಧುನಿಕ ಕಾಲಘಟ್ಟದಲ್ಲಿ ಮೀಸಲಾತಿಯ ಕಲಸುಮೇಲೋಗರ, ಬಾಡಿಗೆ ಮನೆ ಕೊಡದಿರುವುದು… ಹೀಗೆ ಹೊಸ ಬಗೆಯ ಪೋಷಾಕಿನಲ್ಲಿ ದಲಿತರು, ಅಸ್ಪ ಶ್ಯರ ಕತ್ತು ಹಿಸುಕುತ್ತಿದೆ. ಸಂವಿಧಾನ ಮತ್ತು ಅದರಿಂದ ನಿರ್ದೇಶಿತವಾದ ಹಕ್ಕುಗಳಿಗೆ ವ್ಯತಿರಿಕ್ತ ಅರ್ಥಗಳನ್ನು ಕೊಡುವ ಯತ್ನವನ್ನು ಕೆಲ ಜಾತಿವಾದಿ ಮನಸ್ಸಗಳು ನಿರಂತವಾಗಿ ಮಾಡುತ್ತಿವೆ. ಅದಕ್ಕೆ ಅಸ್ಪೃಶ್ಯರನ್ನೇ ಬಳಸಿ ಕೊಳ್ಳುವ ಹುನ್ನಾರ ಕೂಡ ನಡೆಯುತ್ತಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ನೈಜತೆಯನ್ನು ಪ್ರದರ್ಶಿಸುವ ನೆಪದಲ್ಲಿ ಜಾತಿವಾದವನ್ನು ಸಮರ್ಥಿಸಿಕೊಳ್ಳುವಂತಹ ಹುನ್ನಾರಗಳು ನಡೆಯುತ್ತಿವೆ. ಅಂಬೇಡ್ಕರ್ ಜಾತಿವಾದ, ಎಲ್ಲ ಧರ್ಮಗಳ ಮೌಢ್ಯವನ್ನು ವಿರೋಧಿಸಿದವರು, ಜೀವನದಲ್ಲಿ ಅದನ್ನು ಅಳವಡಿಸಿಕೊಂಡಿದ್ದವರು. ಅದನ್ನು ಯಥಾವತ್ತಾಗಿ ಜನರಿಗೆ ಮುಟ್ಟಿಸುವಂತಹ ನಿಟ್ಟಿನಲ್ಲಿ ಬಹುರೂಪಿ ದಿಟ್ಟ ಹೆಜ್ಜೆ ಇಟ್ಟಿದೆ ಅನಿಸುತ್ತಿದೆ. ಅಂಬೇಡ್ಕರ್ ಅವರು ಕಂಡ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕನಸನ್ನು ಈಡೇರಿಸುವುದರ ಭಾಗವಾಗಿ ಬಹುರೂಪಿ ನಾಟಕೋತ್ಸವ ರೂಪಿತವಾಗಿದ್ದರೆ, ಅದು ಹೆಚ್ಚು ಅರ್ಥಪೂರ್ಣ.

-ಎಸ್.ದೀಕ್ಷನ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

2 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

2 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

2 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

2 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

2 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

3 hours ago