ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್. ಡಿ. ಕೋಟೆ ತಾಲ್ಲೂಕಿನ ಡಿ. ಬಿ. ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರಕ್ಕೆ ಮಹೇಂದ್ರ ಹಾಗೂ ಲಕ್ಷಿ ಸಾಕಾನೆಗಳನ್ನು ಕರೆತಂದಿರುವುದು ತಾಲ್ಲೂಕಿನ ಜನತೆಗೆ ಸಂತಸವನ್ನುಂಟು ಮಾಡಿದೆ.
ಮಹಾರಾಜರ ಕಾಲದಿಂದಲೂ ಆನೆ ಖೆಡ್ಡಾಗಳಿಗೆ ಖ್ಯಾತಿ ಪಡೆದಿದ್ದ ಬಳ್ಳೆ ಆನೆ ಶಿಬಿರವು ಕಳೆದ ೧೦ ತಿಂಗಳುಗಳಿಂದ ಯಾವುದೇ ಆನೆಗಳಿಲ್ಲದೆ ಆಕರ್ಷಣೆ ಕಳೆದುಕೊಂಡಿತ್ತು. ಇದೇ ಆನೆ ಶಿಬಿರದಲ್ಲಿ ಪಳಗಿದ್ದ ರಾಜೇಂದ್ರ, ದ್ರೋಣ, ಐರಾವತ, ಅರ್ಜುನ ಆನೆಗಳು ದಸರಾದಲ್ಲಿ ಅಂಬಾರಿ ಹೊತ್ತು ತಾಲ್ಲೂಕಿಗೆ ಕೀರ್ತಿ ತಂದಿದ್ದವು. ಆದರೆ ಕಳೆದ ಡಿಸೆಂಬರ್ನಲ್ಲಿ ಹಾಸನದ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಸಾವನ್ನಪ್ಪಿತ್ತು.
೯ ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ಆತನ ಅಪಾರ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಅರ್ಜು ನನ ಸಾವಿನ ಬಳಿಕ ಬಳ್ಳೆ ಶಿಬಿರದಲ್ಲಿ ಯಾವುದೇ ಆನೆಗಳಿಲ್ಲದೆ ಶಿಬಿರ ಕಳೆಗುಂದಿದ್ದರಿಂದ ಬಳ್ಳೆ ಆನೆ ಶಿಬಿರ ಬರಿ ನೆನಪಿನಲ್ಲಿ ಉಳಿಯಬಹುದು ಎಂಬ ಆತಂಕ ಜನರಲ್ಲಿತ್ತು. ಸದ್ಯ ಈಗ ಈ ಶಿಬಿರಕ್ಕೆ ಮಹೇಂದ್ರ ಮತ್ತು ಲಕ್ಷಿ ಆನೆಗಳು ಬಂದಿರುವುದು ಜೀವಕಳೆ ಬಂದಂತಾಗಿದೆ. ಅರಣ್ಯ ಇಲಾಖೆಯು ದುಬಾರೆ ಆನೆ ಶಿಬಿರದ ಮಾದರಿಯಲ್ಲಿಯೇ ಈ ಶಿಬಿರವನ್ನೂ ಒಂದು ಪ್ರವಾಸಿ ತಾಣವಾಗಿ ರೂಪಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…