ದಸರಾ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೆಲವರು ಮದ್ಯ ಸೇವಿಸಿ ಬಂದು ಹೆಣ್ಣುಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ.
ಮಾನಸ ಗಂಗೋತ್ರಿ ಆವರಣದಲ್ಲಿ ಆಯೋಜನೆಯಾಗಿರುವ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಸಾಕಷ್ಟು ಯುವತಿಯರು ಬಂದು ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳುತ್ತಾರೆ. ಆದರೆ ಈ ಕಾರ್ಯಕ್ರಮಗಳಿಗೆ ಕೆಲ ಮದ್ಯವ್ಯಸನಿಗಳೂ ಆಗಮಿಸುತ್ತಿದ್ದು, ಹೆಣ್ಣು ಮಕ್ಕಳಿರುವ ಕಡೆ ಬಂದು ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ಜನಜಂಗುಳಿಯ ನಡುವೆ ಬೇಕೆಂತಲೇ ಮುಟ್ಟುವುದು, ಕೈ ಹಿಡಿದು ಎಳೆದಿರುವ ಅನುಭವಗಳಾಗಿವೆ. ಈ ಬಾರಿಯ ಯುವ ಸಂಭ್ರಮಕ್ಕೆ ನನ್ನ ಸ್ನೇಹಿತರೊಂದಿಗೆ ಹೋಗಿದ್ದ ನನಗೂ ಇಂತಹದ್ದೇ ಅನುಭವವಾಗಿದೆ. ೩-೪ ಯುವಕರ ಗುಂಪೊಂದು ನಮ್ಮನ್ನು ಹಿಂಬಾಲಿಸಿದಲ್ಲದೆ ಕಾರ್ಯಕ್ರಮ ವೀಕ್ಷಿಸುವ ವೇಳೆ ಪಕ್ಕದಲ್ಲೇ ನಿಂತು ಕೈ ಹಿಡಿದು ಎಳೆದ ಘಟನೆ ನನಗೆ ಆತಂಕ ಉಂಟುಮಾಡಿತು. ಕೂಡಲೇ ನಾನು ಕಾರ್ಯಕ್ರಮದಿಂದ ಹೊರನಡೆದೆ. ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಮದ್ಯಪಾನ ಮಾಡಿ ಬಂದು ಯುವತಿಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದರೆ ನಾವು ಇತರೆ ಕಾರ್ಯಕ್ರಮಗಳನ್ನು ವೀಕ್ಷಿಸುವುದಾದರೂ ಹೇಗೆ? ಆದ್ದರಿಂದ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಯುವ ದಸರಾ, ಆಹಾರ ಮೇಳ, -ಲಪುಷ್ಪ ಪ್ರದರ್ಶನಗಳಲ್ಲಾದರೂ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಅಂಬಿಕ, ಮೈಸೂರು
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…