Andolana originals

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ದಸರಾ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೆಲವರು ಮದ್ಯ ಸೇವಿಸಿ ಬಂದು ಹೆಣ್ಣುಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ.

ಮಾನಸ ಗಂಗೋತ್ರಿ ಆವರಣದಲ್ಲಿ ಆಯೋಜನೆಯಾಗಿರುವ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಸಾಕಷ್ಟು ಯುವತಿಯರು ಬಂದು ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳುತ್ತಾರೆ. ಆದರೆ ಈ ಕಾರ್ಯಕ್ರಮಗಳಿಗೆ ಕೆಲ ಮದ್ಯವ್ಯಸನಿಗಳೂ ಆಗಮಿಸುತ್ತಿದ್ದು, ಹೆಣ್ಣು ಮಕ್ಕಳಿರುವ ಕಡೆ ಬಂದು ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ಜನಜಂಗುಳಿಯ ನಡುವೆ ಬೇಕೆಂತಲೇ ಮುಟ್ಟುವುದು, ಕೈ ಹಿಡಿದು ಎಳೆದಿರುವ ಅನುಭವಗಳಾಗಿವೆ. ಈ ಬಾರಿಯ ಯುವ ಸಂಭ್ರಮಕ್ಕೆ ನನ್ನ ಸ್ನೇಹಿತರೊಂದಿಗೆ ಹೋಗಿದ್ದ ನನಗೂ ಇಂತಹದ್ದೇ ಅನುಭವವಾಗಿದೆ. ೩-೪ ಯುವಕರ ಗುಂಪೊಂದು ನಮ್ಮನ್ನು ಹಿಂಬಾಲಿಸಿದಲ್ಲದೆ ಕಾರ್ಯಕ್ರಮ ವೀಕ್ಷಿಸುವ ವೇಳೆ ಪಕ್ಕದಲ್ಲೇ ನಿಂತು ಕೈ ಹಿಡಿದು ಎಳೆದ ಘಟನೆ ನನಗೆ ಆತಂಕ ಉಂಟುಮಾಡಿತು. ಕೂಡಲೇ ನಾನು ಕಾರ್ಯಕ್ರಮದಿಂದ ಹೊರನಡೆದೆ. ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಮದ್ಯಪಾನ ಮಾಡಿ ಬಂದು ಯುವತಿಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದರೆ ನಾವು ಇತರೆ ಕಾರ್ಯಕ್ರಮಗಳನ್ನು ವೀಕ್ಷಿಸುವುದಾದರೂ ಹೇಗೆ? ಆದ್ದರಿಂದ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಯುವ ದಸರಾ, ಆಹಾರ ಮೇಳ, -ಲಪುಷ್ಪ ಪ್ರದರ್ಶನಗಳಲ್ಲಾದರೂ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.

-ಅಂಬಿಕ, ಮೈಸೂರು

 

andolana

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

6 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

6 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

6 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

7 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

7 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

7 hours ago