Andolana originals

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ದಸರಾ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೆಲವರು ಮದ್ಯ ಸೇವಿಸಿ ಬಂದು ಹೆಣ್ಣುಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ.

ಮಾನಸ ಗಂಗೋತ್ರಿ ಆವರಣದಲ್ಲಿ ಆಯೋಜನೆಯಾಗಿರುವ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಸಾಕಷ್ಟು ಯುವತಿಯರು ಬಂದು ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳುತ್ತಾರೆ. ಆದರೆ ಈ ಕಾರ್ಯಕ್ರಮಗಳಿಗೆ ಕೆಲ ಮದ್ಯವ್ಯಸನಿಗಳೂ ಆಗಮಿಸುತ್ತಿದ್ದು, ಹೆಣ್ಣು ಮಕ್ಕಳಿರುವ ಕಡೆ ಬಂದು ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ಜನಜಂಗುಳಿಯ ನಡುವೆ ಬೇಕೆಂತಲೇ ಮುಟ್ಟುವುದು, ಕೈ ಹಿಡಿದು ಎಳೆದಿರುವ ಅನುಭವಗಳಾಗಿವೆ. ಈ ಬಾರಿಯ ಯುವ ಸಂಭ್ರಮಕ್ಕೆ ನನ್ನ ಸ್ನೇಹಿತರೊಂದಿಗೆ ಹೋಗಿದ್ದ ನನಗೂ ಇಂತಹದ್ದೇ ಅನುಭವವಾಗಿದೆ. ೩-೪ ಯುವಕರ ಗುಂಪೊಂದು ನಮ್ಮನ್ನು ಹಿಂಬಾಲಿಸಿದಲ್ಲದೆ ಕಾರ್ಯಕ್ರಮ ವೀಕ್ಷಿಸುವ ವೇಳೆ ಪಕ್ಕದಲ್ಲೇ ನಿಂತು ಕೈ ಹಿಡಿದು ಎಳೆದ ಘಟನೆ ನನಗೆ ಆತಂಕ ಉಂಟುಮಾಡಿತು. ಕೂಡಲೇ ನಾನು ಕಾರ್ಯಕ್ರಮದಿಂದ ಹೊರನಡೆದೆ. ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಮದ್ಯಪಾನ ಮಾಡಿ ಬಂದು ಯುವತಿಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದರೆ ನಾವು ಇತರೆ ಕಾರ್ಯಕ್ರಮಗಳನ್ನು ವೀಕ್ಷಿಸುವುದಾದರೂ ಹೇಗೆ? ಆದ್ದರಿಂದ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಯುವ ದಸರಾ, ಆಹಾರ ಮೇಳ, -ಲಪುಷ್ಪ ಪ್ರದರ್ಶನಗಳಲ್ಲಾದರೂ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.

-ಅಂಬಿಕ, ಮೈಸೂರು

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago