ದಸರಾ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೆಲವರು ಮದ್ಯ ಸೇವಿಸಿ ಬಂದು ಹೆಣ್ಣುಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ.
ಮಾನಸ ಗಂಗೋತ್ರಿ ಆವರಣದಲ್ಲಿ ಆಯೋಜನೆಯಾಗಿರುವ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಸಾಕಷ್ಟು ಯುವತಿಯರು ಬಂದು ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳುತ್ತಾರೆ. ಆದರೆ ಈ ಕಾರ್ಯಕ್ರಮಗಳಿಗೆ ಕೆಲ ಮದ್ಯವ್ಯಸನಿಗಳೂ ಆಗಮಿಸುತ್ತಿದ್ದು, ಹೆಣ್ಣು ಮಕ್ಕಳಿರುವ ಕಡೆ ಬಂದು ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ಜನಜಂಗುಳಿಯ ನಡುವೆ ಬೇಕೆಂತಲೇ ಮುಟ್ಟುವುದು, ಕೈ ಹಿಡಿದು ಎಳೆದಿರುವ ಅನುಭವಗಳಾಗಿವೆ. ಈ ಬಾರಿಯ ಯುವ ಸಂಭ್ರಮಕ್ಕೆ ನನ್ನ ಸ್ನೇಹಿತರೊಂದಿಗೆ ಹೋಗಿದ್ದ ನನಗೂ ಇಂತಹದ್ದೇ ಅನುಭವವಾಗಿದೆ. ೩-೪ ಯುವಕರ ಗುಂಪೊಂದು ನಮ್ಮನ್ನು ಹಿಂಬಾಲಿಸಿದಲ್ಲದೆ ಕಾರ್ಯಕ್ರಮ ವೀಕ್ಷಿಸುವ ವೇಳೆ ಪಕ್ಕದಲ್ಲೇ ನಿಂತು ಕೈ ಹಿಡಿದು ಎಳೆದ ಘಟನೆ ನನಗೆ ಆತಂಕ ಉಂಟುಮಾಡಿತು. ಕೂಡಲೇ ನಾನು ಕಾರ್ಯಕ್ರಮದಿಂದ ಹೊರನಡೆದೆ. ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಮದ್ಯಪಾನ ಮಾಡಿ ಬಂದು ಯುವತಿಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದರೆ ನಾವು ಇತರೆ ಕಾರ್ಯಕ್ರಮಗಳನ್ನು ವೀಕ್ಷಿಸುವುದಾದರೂ ಹೇಗೆ? ಆದ್ದರಿಂದ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಯುವ ದಸರಾ, ಆಹಾರ ಮೇಳ, -ಲಪುಷ್ಪ ಪ್ರದರ್ಶನಗಳಲ್ಲಾದರೂ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಅಂಬಿಕ, ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…