Andolana originals

ಓದುಗರ ಪತ್ರ: ಡೇಟಿಂಗ್ ಆಪ್‌ಗಳನ್ನು ನಿಷೇಧಿಸಿ

ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ ಗಂಭೀರವಾಗಿವೆ.

ಬಹುತೇಕ ಯುವಕರು ಈ ಆಪ್‌ಗಳಲ್ಲಿ ಅತಿಯಾಗಿ ತೊಡಗಿಸಿಕೊಂಡುನೈಜ ಜೀವನದಿಂದ ದೂರವಾಗುತ್ತಿದ್ದಾರೆ. ಸುಳ್ಳು ಪ್ರೊಫೈಲ್‌ಗಳು, ಮೋಸಗಳು, ಬ್ಲಾಕ್‌ಮೇಲ್‌ಗಳು ಹಾಗೂ ಆನ್‌ಲೈನ್ ಅಪರಾಧಗಳ ಪ್ರಮಾಣವೂ ಏರಿಕೆಯಾಗುತ್ತಿದೆ. ಡೇಟಿಂಗ್ ಆಪ್‌ಗಳ ಮೂಲಕ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳುವ ಯುವಕರು- ಯುವತಿಯರು ಸೈಬರ್ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹಲವಾರು ಯುವತಿ ಯರ ಶೋಷಣೆ ನಡೆಯುತ್ತಿದೆ.

ಈ ಆಪ್‌ಗಳು ಮಾನಸಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿವೆ. ಜೊತೆಗೆ ಏಕಾಂತ, ಆತಂಕ ಮತ್ತು ಮಾನಸಿಕ ಕ್ಷೋಭೆಯನ್ನು ಉಂಟು ಮಾಡಿ,ಯುವ ಸಮುದಾಯದಲ್ಲಿ ಆತ್ಮವಿಶ್ವಾಸದ ಕೊರತೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ನಂಬಿಕೆ ಮತ್ತು ಗೌರವದ ಬಾಂಧವ್ಯ ಹದಗೆಡುತ್ತಿದೆ. ಆದ್ದರಿಂದ ಸರ್ಕಾರವು ಡೇಟಿಂಗ್ ಆಪ್‌ಗಳನ್ನು (ಟೆಂಡರ್, ಬ್ಲೂಕಾಟ್ ಇತ್ಯಾದಿ) ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು, ಸಾಧ್ಯವಾದರೆ ಸಂಪೂರ್ಣ ನಿಷೇಧಿಸಬೇಕು. ಯುವ ಪೀಳಿಗೆಗೆ ಸುರಕ್ಷಿತ ಮತ್ತು ಸನ್ಮಾರ್ಗದ ದಾರಿ ತೋರುವುದು ಸರ್ಕಾರದ ಜವಾಬ್ದಾರಿ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago