ಓದುಗರ ಪತ್ರ
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ ಡ್ರಾಮಾ ಕಲ್ಪನಾ ಲೋಕದಲ್ಲಿ ಬಂದಿಯಾಗುತ್ತಿದ್ದಾರೆ.
ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರಿಯನ್ ವಿಷಯಗಳ ಬಳಕೆ ಕಳೆದ ಎರಡು ವರ್ಷಗಳಲ್ಲಿ ಶೇ.೩೦೦ ರಷ್ಟು ಹೆಚ್ಚಾಗಿದೆ. ಇದು ಕೇವಲ ಮನೋರಂಜನೆಯಾಗಿ ಉಳಿಯದೆ ಡಿಜಿಟಲ್ ಡ್ರಗ್ ಆಗಿ ಮಾರ್ಪಡುತ್ತಿದೆ. ಈ ಸರಣಿಗಳು ಮತ್ತು ಗೇಮ್ಗಳು ಹದಿಹರೆಯದವರಲ್ಲಿ ವಾಸ್ತವ ಪ್ರಜ್ಞೆಯನ್ನು ನಾಶಪಡಿಸಿ ಅವರನ್ನು ಒಂಟಿತನ ಮತ್ತು ಖಿನ್ನತೆಯ ಸುಳಿಗೆ ದೂಡುತ್ತಿವೆ. ಶೈಕ್ಷಣಿಕ ಪ್ರಗತಿಯ ಕುಸಿತ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ನಾಶಕ್ಕೆ ಇದು ನಾಂದಿಯಾಗುತ್ತಿದೆ.
ಸರ್ಕಾರವು ಇಂತಹ ಅಪಾಯಕಾರಿ ಗೇಮ್ಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಬೇಕು ಮತ್ತು ಒಟಿಟಿ ವೇದಿಕೆಗಳಲ್ಲಿನ ವಿಷಯಗಳ ಮೇಲೆ ನಿಯಂತ್ರಣ ಹೇರಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…