Andolana originals

ಓದುಗರ ಪತ್ರ:  ಅಲ್ಯುಮಿನಿಯಂ ಪಾತ್ರೆಗಳ ನಿಷೇಧ ಸ್ವಾಗತಾರ್ಹ

ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಸೇರ್ಪಡೆಗೊಂಡು, ಮೆದುಳಿನ ಬೆಳವಣಿಗೆ, ನರಮಂಡಲದ ಕಾರ್ಯನಿರ್ವಹಣೆ ಹಾಗೂ ದೇಹದ ಪ್ರತಿರೋಧಶಕ್ತಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಹಾನಿಕಾರ ಪರಿಣಾಮಗಳಿಂದ ನಮ್ಮ ಶಾಲಾ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರ ಕೈಗೊಂಡಿರುವ ಈ ಕ್ರಮ ಸ್ವಾಗತಾರ್ಹ.

ಅಡುಗೆಗೆ ಸುರಕ್ಷಿತವಾದ ಸ್ಟೇನ್ ಲೆಸ್ ಸ್ಟೀಲ್ ಅಥವಾ ಕಲಾಯಿ ಮಾಡಿರುವ ತಾಮ್ರದ ಪಾತ್ರೆಗಳನ್ನು ಬಳಸುವುದು ಆರೋಗ್ಯಕರ ಮತ್ತು ದೀರ್ಘಾವಧಿಯ ಪ್ರಯೋಜನಕಾರಿಯಾಗಿದೆ. ಸರ್ಕಾರ ಈ ಬದಲಾವಣೆಗೆ ೨೨ ಕೋಟಿ ರೂ. ಗಳ ಅನುದಾನ ನೀಡಿರುವುದೂ ಪ್ರೋತ್ಸಾಹದಾಯಕ ವಿಚಾರ. ಆದರೆ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಅಭಿವೃದ್ಧಿ ಸಮಿತಿಗಳು ಕ್ರಮ ಕೈಗೊಳ್ಳುವುದು ಅಗತ್ಯ.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

18 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

23 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago