ಓದುಗರ ಪತ್ರ
ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಸೇರ್ಪಡೆಗೊಂಡು, ಮೆದುಳಿನ ಬೆಳವಣಿಗೆ, ನರಮಂಡಲದ ಕಾರ್ಯನಿರ್ವಹಣೆ ಹಾಗೂ ದೇಹದ ಪ್ರತಿರೋಧಶಕ್ತಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಹಾನಿಕಾರ ಪರಿಣಾಮಗಳಿಂದ ನಮ್ಮ ಶಾಲಾ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರ ಕೈಗೊಂಡಿರುವ ಈ ಕ್ರಮ ಸ್ವಾಗತಾರ್ಹ.
ಅಡುಗೆಗೆ ಸುರಕ್ಷಿತವಾದ ಸ್ಟೇನ್ ಲೆಸ್ ಸ್ಟೀಲ್ ಅಥವಾ ಕಲಾಯಿ ಮಾಡಿರುವ ತಾಮ್ರದ ಪಾತ್ರೆಗಳನ್ನು ಬಳಸುವುದು ಆರೋಗ್ಯಕರ ಮತ್ತು ದೀರ್ಘಾವಧಿಯ ಪ್ರಯೋಜನಕಾರಿಯಾಗಿದೆ. ಸರ್ಕಾರ ಈ ಬದಲಾವಣೆಗೆ ೨೨ ಕೋಟಿ ರೂ. ಗಳ ಅನುದಾನ ನೀಡಿರುವುದೂ ಪ್ರೋತ್ಸಾಹದಾಯಕ ವಿಚಾರ. ಆದರೆ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಅಭಿವೃದ್ಧಿ ಸಮಿತಿಗಳು ಕ್ರಮ ಕೈಗೊಳ್ಳುವುದು ಅಗತ್ಯ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…