Mysore
34
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ಓದುಗರ ಪತ್ರ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲಿನ ತಂಬಾಕು ಹಾಗೂ ಗುಟ್ಕಾ ಜಾಹೀರಾತಿನಿಂದ ಯುವ ಜನರ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು ‘ಆಂದೋಲನ’ ಪತ್ರಿಕೆಯ ೨೦೨೫ ಡಿಸೆಂಬರ್ ೨೧ರ ಸಂಚಿಕೆಯಲ್ಲಿ ಬಿಎಂಟಿಟಿಸಿ ಜನಹಿತ ಕಾಯಲಿ ಎಂಬ ಶೀರ್ಷಿಕೆಯಡಿಯಲ್ಲಿ ಓದುಗರ ಪತ್ರ ಪ್ರಕಟವಾಗಿತ್ತು. ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಿಸಲು ಆಗ್ರಹಿಸಿ ರಾಜ್ಯಾದ್ಯಂತ ಬಸ್ ಮೇಲೆ ಅಳವಡಿಸಿದ್ದ ಜಾಹೀರಾತನ್ನು ಕಿತ್ತೊಗೆದು ಸಾರ್ವಜನಿಕರು ಪ್ರತಿಭಟನೆಯನ್ನೂ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ರಾಜ್ಯರಸ್ತೆ ಸಾರಿಗೆಯ ನಾಲ್ಕೂ ನಿಗಮಗಳು  ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಗುಟ್ಕಾ ಹಾಗೂ ತಂಬಾಕು ಜಾಹೀರಾತು ನಿಷೇಧಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
– ಎಚ್.ಕೆ. ವಿಜಯಕುಮಾರ್, ಬೆಂಗಳೂರು

Tags:
error: Content is protected !!