ಓದುಗರ ಪತ್ರ
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲಿನ ತಂಬಾಕು ಹಾಗೂ ಗುಟ್ಕಾ ಜಾಹೀರಾತಿನಿಂದ ಯುವ ಜನರ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು ‘ಆಂದೋಲನ’ ಪತ್ರಿಕೆಯ ೨೦೨೫ ಡಿಸೆಂಬರ್ ೨೧ರ ಸಂಚಿಕೆಯಲ್ಲಿ ಬಿಎಂಟಿಟಿಸಿ ಜನಹಿತ ಕಾಯಲಿ ಎಂಬ ಶೀರ್ಷಿಕೆಯಡಿಯಲ್ಲಿ ಓದುಗರ ಪತ್ರ ಪ್ರಕಟವಾಗಿತ್ತು. ಸಾರಿಗೆ ನಿಗಮದ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಿಸಲು ಆಗ್ರಹಿಸಿ ರಾಜ್ಯಾದ್ಯಂತ ಬಸ್ ಮೇಲೆ ಅಳವಡಿಸಿದ್ದ ಜಾಹೀರಾತನ್ನು ಕಿತ್ತೊಗೆದು ಸಾರ್ವಜನಿಕರು ಪ್ರತಿಭಟನೆಯನ್ನೂ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ರಾಜ್ಯರಸ್ತೆ ಸಾರಿಗೆಯ ನಾಲ್ಕೂ ನಿಗಮಗಳು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಗುಟ್ಕಾ ಹಾಗೂ ತಂಬಾಕು ಜಾಹೀರಾತು ನಿಷೇಧಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
– ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…