ಇತ್ತೀಚೆಗೆ ಆನ್ಲೈನ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆನ್ಲೈನ್ ಮೂಲಕ ಹೂಡಿಕೆ ಮಾಡುವುದು, ಆನ್ಲೈನ್ ಬೆಟ್ಟಿಂಗ್ ಆಪ್ ಗಳು, ರಮ್ಮಿ, ತೀನ್ಪಟ್ಟಿಯಂತಹ ಜೂಜು ಆಟಗಳು ಜನರನ್ನು ಆಕರ್ಷಿಸುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಆನ್ಲೈನ್ ಆಪ್ಗಳ ಮೂಲಕ ಹೂಡಿಕೆ ಮಾಡಿ ಎಂಬ ಹಾಗೂ ರಮ್ಮಿ ಆಡಿ ಹಣ ಗಳಿಸಿ ಎಂಬ ಜಾಹೀರಾತುಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿಸಿಕೊಂಡಿರುವವರು, ಕೆಲವು ಸಿನಿಮಾ ತಾರೆಯರು ಹಾಗೂ ಕೆಲ ಕ್ರೀಡಾಪಟುಗಳು ಬೆಟ್ಟಿಂಗ್ ಆಪ್ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.
ಇದರಿಂದಾಗಿ ಯುವ ಸಮೂಹ ಹಾದಿತಪ್ಪುತ್ತಿದ್ದು, ಸುಲಭವಾಗಿ ಹಣ ಗಳಿಸಬಹುದು ಎಂದು ಆಪ್ಗಳಲ್ಲಿ ಹೂಡಿಕೆ ಮಾಡುವುದು ಹಾಗೂ ಆನ್ಲೈನ್ ಬೆಟ್ಟಿಂಗ್ ಆಪ್ಗಳಲ್ಲಿ ಹಣ ಹಾಕಿ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಅವರ ಕುಟುಂಬಗಳು ದಿವಾಳಿಯಾಗುತ್ತಿದ್ದು, ಅವರ ಬದುಕು ಬೀದಿಗೆ ಬಂದಿದೆ. ಕೆಲ ಆನ್ಲೈನ್ ಜೂಜಿನ ಆಪ್ಗಳು ತಮ್ಮ ಜಾಹೀರಾತಿನಲ್ಲಿ ಅವರು ಇಷ್ಟು ಹಣ ಗಳಿಸಿದ್ದಾರೆ, ಇವರು ಹಣ ಗಳಿಸಿ ಕಾರು, ಮನೆ ಖರೀದಿ ಮಾಡಿದ್ದಾರೆ ಎಂಬ ಸುಳ್ಳು ಜಾಹೀರಾತುಗಳನ್ನು ನೀಡುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರಂತೂ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸರ್ಕಾರ ಇಂತಹ ಬೆಟ್ಟಿಂಗ್ ಹಾಗೂ ಆನ್ಲೈನ್ ಹೂಡಿಕೆ ಆಪ್ಗಳನ್ನು ನಿಷೇಽಸಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…