ಇತ್ತೀಚೆಗೆ ಆನ್ಲೈನ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆನ್ಲೈನ್ ಮೂಲಕ ಹೂಡಿಕೆ ಮಾಡುವುದು, ಆನ್ಲೈನ್ ಬೆಟ್ಟಿಂಗ್ ಆಪ್ ಗಳು, ರಮ್ಮಿ, ತೀನ್ಪಟ್ಟಿಯಂತಹ ಜೂಜು ಆಟಗಳು ಜನರನ್ನು ಆಕರ್ಷಿಸುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಆನ್ಲೈನ್ ಆಪ್ಗಳ ಮೂಲಕ ಹೂಡಿಕೆ ಮಾಡಿ ಎಂಬ ಹಾಗೂ ರಮ್ಮಿ ಆಡಿ ಹಣ ಗಳಿಸಿ ಎಂಬ ಜಾಹೀರಾತುಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿಸಿಕೊಂಡಿರುವವರು, ಕೆಲವು ಸಿನಿಮಾ ತಾರೆಯರು ಹಾಗೂ ಕೆಲ ಕ್ರೀಡಾಪಟುಗಳು ಬೆಟ್ಟಿಂಗ್ ಆಪ್ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.
ಇದರಿಂದಾಗಿ ಯುವ ಸಮೂಹ ಹಾದಿತಪ್ಪುತ್ತಿದ್ದು, ಸುಲಭವಾಗಿ ಹಣ ಗಳಿಸಬಹುದು ಎಂದು ಆಪ್ಗಳಲ್ಲಿ ಹೂಡಿಕೆ ಮಾಡುವುದು ಹಾಗೂ ಆನ್ಲೈನ್ ಬೆಟ್ಟಿಂಗ್ ಆಪ್ಗಳಲ್ಲಿ ಹಣ ಹಾಕಿ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಅವರ ಕುಟುಂಬಗಳು ದಿವಾಳಿಯಾಗುತ್ತಿದ್ದು, ಅವರ ಬದುಕು ಬೀದಿಗೆ ಬಂದಿದೆ. ಕೆಲ ಆನ್ಲೈನ್ ಜೂಜಿನ ಆಪ್ಗಳು ತಮ್ಮ ಜಾಹೀರಾತಿನಲ್ಲಿ ಅವರು ಇಷ್ಟು ಹಣ ಗಳಿಸಿದ್ದಾರೆ, ಇವರು ಹಣ ಗಳಿಸಿ ಕಾರು, ಮನೆ ಖರೀದಿ ಮಾಡಿದ್ದಾರೆ ಎಂಬ ಸುಳ್ಳು ಜಾಹೀರಾತುಗಳನ್ನು ನೀಡುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರಂತೂ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸರ್ಕಾರ ಇಂತಹ ಬೆಟ್ಟಿಂಗ್ ಹಾಗೂ ಆನ್ಲೈನ್ ಹೂಡಿಕೆ ಆಪ್ಗಳನ್ನು ನಿಷೇಽಸಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…