Andolana originals

ಓದುಗರ ಪತ್ರ: ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಿಸಿ

ಇತ್ತೀಚೆಗೆ ಆನ್‌ಲೈನ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆನ್‌ಲೈನ್‌ ಮೂಲಕ ಹೂಡಿಕೆ ಮಾಡುವುದು, ಆನ್‌ಲೈನ್ ಬೆಟ್ಟಿಂಗ್ ಆಪ್ ಗಳು, ರಮ್ಮಿ, ತೀನ್‌ಪಟ್ಟಿಯಂತಹ ಜೂಜು ಆಟಗಳು ಜನರನ್ನು ಆಕರ್ಷಿಸುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆನ್‌ಲೈನ್ ಆಪ್‌ಗಳ ಮೂಲಕ ಹೂಡಿಕೆ ಮಾಡಿ ಎಂಬ ಹಾಗೂ ರಮ್ಮಿ ಆಡಿ ಹಣ ಗಳಿಸಿ ಎಂಬ ಜಾಹೀರಾತುಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿಸಿಕೊಂಡಿರುವವರು, ಕೆಲವು ಸಿನಿಮಾ ತಾರೆಯರು ಹಾಗೂ ಕೆಲ ಕ್ರೀಡಾಪಟುಗಳು ಬೆಟ್ಟಿಂಗ್ ಆಪ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.

ಇದರಿಂದಾಗಿ ಯುವ ಸಮೂಹ ಹಾದಿತಪ್ಪುತ್ತಿದ್ದು, ಸುಲಭವಾಗಿ ಹಣ ಗಳಿಸಬಹುದು ಎಂದು ಆಪ್‌ಗಳಲ್ಲಿ ಹೂಡಿಕೆ ಮಾಡುವುದು ಹಾಗೂ ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳಲ್ಲಿ ಹಣ ಹಾಕಿ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಅವರ ಕುಟುಂಬಗಳು ದಿವಾಳಿಯಾಗುತ್ತಿದ್ದು, ಅವರ ಬದುಕು ಬೀದಿಗೆ ಬಂದಿದೆ. ಕೆಲ ಆನ್‌ಲೈನ್ ಜೂಜಿನ ಆಪ್‌ಗಳು ತಮ್ಮ ಜಾಹೀರಾತಿನಲ್ಲಿ ಅವರು ಇಷ್ಟು ಹಣ ಗಳಿಸಿದ್ದಾರೆ, ಇವರು ಹಣ ಗಳಿಸಿ ಕಾರು, ಮನೆ ಖರೀದಿ ಮಾಡಿದ್ದಾರೆ ಎಂಬ ಸುಳ್ಳು ಜಾಹೀರಾತುಗಳನ್ನು ನೀಡುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರಂತೂ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸರ್ಕಾರ ಇಂತಹ ಬೆಟ್ಟಿಂಗ್ ಹಾಗೂ ಆನ್‌ಲೈನ್ ಹೂಡಿಕೆ ಆಪ್‌ಗಳನ್ನು ನಿಷೇಽಸಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

4 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

17 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

17 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

17 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

18 hours ago