ಆಗಸ್ಟ್ 15ರಂದು ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳಲ್ಲಿಯೂ ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರ ಧ್ವಜವನ್ನು ಪ್ಲಾಸ್ಟಿಕ್ ನಿಂದ ತಯಾರಿಸಬಾರದು ಮತ್ತು ಪ್ಲಾಸ್ಟಿಕ್ ಬಾವುಟ ಗಳನ್ನು ಬಳಸಬಾರದು ಎಂದು ಸರ್ಕಾರಗಳು ಸಾರಿ ಹೇಳುತ್ತಿವೆ.
ರಾಷ್ಟ್ರ ಧ್ವಜಕ್ಕೆ ಗೌರವ ಸೂಚಿಸಬೇಕಾದದ್ದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಆದರೆ ಹಲವರು ಬಟ್ಟೆ ಬಾವುಟಗಳ ಬದಲಾಗಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸುತ್ತಿದ್ದಾರೆ. ಈ ಪ್ಲಾಸ್ಟಿಕ್ ಬಾವುಟಗಳು ಸ್ಥಳೀಯ ಅಂಗಡಿಗಳಲ್ಲಿ ದೊರೆಯುವುದರಿಂದ ಅವು ಸುಲಭವಾಗಿ ಮಕ್ಕಳ ಕೈಸೇರುತ್ತವೆ. ಅಲ್ಲದೆ ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಮುಗಿದ ಬಳಿಕ ಆ ಬಾವುಟಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಾರೆ. ಇದರಿಂದ ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದಂತಾಗುತ್ತದೆ. ಇಲ್ಲಿ ಮಕ್ಕಳದ್ದು ತಪ್ಪು ಎಂದು ಹೇಳಲಾಗದು. ಸರ್ಕಾರ ಈ ಈ ಬಗ್ಗೆ ಗಮನಹರಿಸಿ ಪ್ಲಾಸ್ಟಿಕ್ ಬಾವುಟಗಳನ್ನು ತಯಾರಿಸುವವರು ಮತ್ತು ಅದನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ಪ್ಲಾಸ್ಟಿಕ್ ಬಾವುಟಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…