Andolana originals

ಓದುಗರ ಪತ್ರ: ಮಾರುಕಟ್ಟೆ ಬಳಿ ಧೂಮಪಾನ ನಿಷೇಧ ಮಾಡಿ

ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿದೆ. ಪಾನ್ ಮಸಾಲ ತಿಂದು ಎಲ್ಲೆಂದರಲ್ಲಿ ಉಗುಳುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ.

ಈ ಸ್ಥಳದಲ್ಲಿ ವ್ಯಾಪಾರ ಮಾಡುವ ಕೆಲವರು ಧೂಮಪಾನ ಮಾಡಿ ಅದೇ ಕೈಗಳಿಂದ ಹೂ , ಹಣ್ಣು, ತರಕಾರಿ, ಸೇರಿದಂತೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಇದರಿಂದ ಸಾರ್ವಜನಿಕರ ಆರೋಗ್ಯ ಹದಗೆಡುವ ಸಾಧ್ಯತೆಯಿರುತ್ತದೆ. ಕೂಡಲೇ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು, ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಂಡು ಮಾರುಕಟ್ಟೆಯ ಬಳಿ ಬೀಡಿ, ಸಿಗರೇಟು, ಪಾನ್ ಮಸಾಲ ಪದಾರ್ಥಗಳನ್ನು ಮಾರಾಟ ಮಾಡದಂತೆ ನಿಷೇಧಿಸಬೇಕು.

ಕೆಲವು ವ್ಯಾಪಾರಸ್ಥರು ವ್ಯಾಪಾರ ಮಾಡುವಾಗ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಯುವ ಸಮಯದಲ್ಲಿ ಧೂಮಪಾನ, ಮದ್ಯಪಾನ ಮಾಡಿ ವ್ಯಾಪಾರ ವಹಿವಾಟು ನಡೆಸುವವರಿಗೆ ದಂಡ ವಿಧಿಸಬೇಕು. ಹಾಗೆಯೇ ಅಂಗಡಿಯ ಪರವಾನಗಿಯನ್ನು ರದ್ದು ಮಾಡಬೇಕಾಗಿದೆ.

-ನಾಗೇಶ್ , ಮಾನಸಗಂಗೋತ್ರಿ ಮೈಸೂರು

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

45 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

1 hour ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago