ಓದುಗರ ಪತ್ರ
ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ಜನ್ಮದಿನದ ನೆಪ ಮಾಡಿಕೊಂಡು ರಾತ್ರಿ ೧೧ರ ನಂತರ ಭಯಂಕರ ಸದ್ದು ಮಾಡುವ, ಆಕಾಶಕ್ಕೆ ಚಿಮ್ಮುವ ಪಟಾಕಿಗಳನ್ನು ಹಚ್ಚುವ ಮೂಲಕ ಹಿರಿಯ ನಾಗರಿಕರಿಗೆ, ಚಿಕ್ಕಮಕ್ಕಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ಇದೊಂದು ರೀತಿಯಲ್ಲಿ ಅನಾಗರಿಕ ವರ್ತನೆಯಾಗಿದೆ. ಇವರನ್ನು ನೋಡಿ ಹಲವರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವ ಪರಿಪಾಠವನ್ನು ಆರಂಭಿಸಿದ್ದಾರೆ. ಆಯಾ ಬಡಾವಣೆಗಳ ವ್ಯಾಪ್ತಿಯ ಪೊಲೀಸರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…