ಓದುಗರ ಪತ್ರ
ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ಜನ್ಮದಿನದ ನೆಪ ಮಾಡಿಕೊಂಡು ರಾತ್ರಿ ೧೧ರ ನಂತರ ಭಯಂಕರ ಸದ್ದು ಮಾಡುವ, ಆಕಾಶಕ್ಕೆ ಚಿಮ್ಮುವ ಪಟಾಕಿಗಳನ್ನು ಹಚ್ಚುವ ಮೂಲಕ ಹಿರಿಯ ನಾಗರಿಕರಿಗೆ, ಚಿಕ್ಕಮಕ್ಕಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ಇದೊಂದು ರೀತಿಯಲ್ಲಿ ಅನಾಗರಿಕ ವರ್ತನೆಯಾಗಿದೆ. ಇವರನ್ನು ನೋಡಿ ಹಲವರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವ ಪರಿಪಾಠವನ್ನು ಆರಂಭಿಸಿದ್ದಾರೆ. ಆಯಾ ಬಡಾವಣೆಗಳ ವ್ಯಾಪ್ತಿಯ ಪೊಲೀಸರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…