Andolana originals

ಓದುಗರ ಪತ್ರ: ರಾತ್ರಿ 11ರ ನಂತರ ಪಟಾಕಿ ಸಿಡಿತ ನಿಷೇಧಿಸಿ

ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್‌ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ಜನ್ಮದಿನದ ನೆಪ ಮಾಡಿಕೊಂಡು ರಾತ್ರಿ ೧೧ರ ನಂತರ ಭಯಂಕರ ಸದ್ದು ಮಾಡುವ, ಆಕಾಶಕ್ಕೆ ಚಿಮ್ಮುವ ಪಟಾಕಿಗಳನ್ನು ಹಚ್ಚುವ ಮೂಲಕ ಹಿರಿಯ ನಾಗರಿಕರಿಗೆ, ಚಿಕ್ಕಮಕ್ಕಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.

ಇದೊಂದು ರೀತಿಯಲ್ಲಿ ಅನಾಗರಿಕ ವರ್ತನೆಯಾಗಿದೆ. ಇವರನ್ನು ನೋಡಿ ಹಲವರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವ ಪರಿಪಾಠವನ್ನು ಆರಂಭಿಸಿದ್ದಾರೆ. ಆಯಾ ಬಡಾವಣೆಗಳ ವ್ಯಾಪ್ತಿಯ ಪೊಲೀಸರು ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago