ಓದುಗರ ಪತ್ರ
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು ಜನರು ಪ್ರತಿನಿತ್ಯ ಆಗಮಿಸುತ್ತಾರೆ.
ಈ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್ಗಳ ಅಕ್ರಮ ಮಾರಾಟ ಮತ್ತು ಅಸುರಕ್ಷಿತ ಬಳಕೆ ಇಂತಹ ಅವಘಡಗಳಿಗೆ ಪ್ರಮುಖ ಕಾರಣವಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಗಟ್ಟಲು, ಮೈಸೂರು ಅರಮನೆ ಸುತ್ತಮುತ್ತಲ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್ಗಳ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
ಅದೇ ರೀತಿ, ಸಾರ್ವಜನಿಕ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…