ಓದುಗರ ಪತ್ರ
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು ಜನರು ಪ್ರತಿನಿತ್ಯ ಆಗಮಿಸುತ್ತಾರೆ.
ಈ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್ಗಳ ಅಕ್ರಮ ಮಾರಾಟ ಮತ್ತು ಅಸುರಕ್ಷಿತ ಬಳಕೆ ಇಂತಹ ಅವಘಡಗಳಿಗೆ ಪ್ರಮುಖ ಕಾರಣವಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಗಟ್ಟಲು, ಮೈಸೂರು ಅರಮನೆ ಸುತ್ತಮುತ್ತಲ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್ಗಳ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
ಅದೇ ರೀತಿ, ಸಾರ್ವಜನಿಕ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…