ಓದುಗರ ಪತ್ರ
ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ ಆರ್ಭಟಕ್ಕೆ ೧೭ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕಾರಿ ವಿಷಯ. ನಗರ ಪ್ರದೇಶಗಳಲ್ಲಿ ಗಣೇಶ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಲು ಈಗ ಯುವಕರು ಡಿಜೆ ಅಳವಡಿಸಿ ಭಾರಿ ಸದ್ದಿಗೆ ಕುಣಿಯುವುದನ್ನು ಎಲ್ಲರೂ ಗಮನಿಸಿರುತ್ತಾರೆ.
ಈ ಶಬ್ದದಿಂದಾಗಿ ಹೃದಯ ಸಂಬಂಧಿ ರೋಗಿಗಳು, ಚಿಕ್ಕ ಮಕ್ಕಳು, ವಯೋವೃದ್ದರು ಜೀವ ಕೈಯಲ್ಲಿ ಹಿಡಿದುಕೊಂಡೇ ಬದುಕುವಂತೆ ಆಗಿದೆ. ಮುಂದಾದರೂ ಪ್ರಾಣಕ್ಕೆ ಕುತ್ತು ತರುವ ಡಿಜೆ ಸೌಂಡ್ ಬಳಕೆಗೆ ಸಂಪೂರ್ಣ ನಿಷೇಧ ಹೇರುವ ಅಗತ್ಯವಿದೆ. ಸಂಬಂಧಪಟ್ಟವರು ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿ, ಹಬ್ಬ, ಉತ್ಸವ ಆಚರಣೆ ಮಾಡುವಾಗ ಜನ ಸಾಮಾನ್ಯರ ಹಿತ ದೃಷ್ಟಿಯಿಂದ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ.
–ಡಾ.ಎ.ಕೆ. ಜಯವೀರ, ಖೇಮಲಾಪುರ, ರಾಯಬಾಗ ತಾಲ್ಲೂಕು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…