ಓದುಗರ ಪತ್ರ
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ ಸಾಲಿನಲ್ಲೇ ೪,೦೮೭ ಕೋಟಿ ರೂ. ದಂಡ ವಸೂಲಿ ಮಾಡಿರುವುದು ವರದಿಯಾಗಿದೆ.
ಮಹಿಳೆಯೊಬ್ಬರ ಉಳಿತಾಯ ಖಾತೆಗೆ ಜಮೆಯಾದ ಮನ್ರೇಗಾದ ಕೂಲಿ ಹಣವಾದ ೫೦೦ ರೂ.ಗಳಲ್ಲಿ ೪೪೦ ರೂ. ಕಡಿತಗೊಳಿಸಿ ದಂಡ ವಸೂಲಿ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಬಡ ಜನರ ದಿನದ ದುಡಿಮೆಯ ಹಣವನ್ನು ದಂಡದ ರೂಪದಲ್ಲಿ ಪಡೆದರೆ ಜೀವನ ನಿರ್ವ ಹಣೆ ಹೇಗೆ ಮಾಡುವುದು ಎಂಬ ಪ್ರಶ್ನೆ ಕಾಡುತ್ತದೆ.
ಉಳಿತಾಯ ಖಾತೆಯಲ್ಲಿರುವ ಹಣಕ್ಕೆ ಈ ಮೊದಲು ಶೇ.೪ ಬಡ್ಡಿ ನೀಡುತ್ತಿದ್ದ ಬ್ಯಾಂಕ್ಗಳು ಈಗ ಬಡ್ಡಿಯ ಮೊತ್ತವನ್ನು ಶೇ. ೨.೫ ಬಡ್ಡಿ ನೀಡುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಆರ್ಬಿಐ ಗ್ರಾಕರಿಗೆ ದಂಡ ವಿಧಿಸುತ್ತಿರುವ ಬ್ಯಾಂಕ್ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ಗ್ರಾಹಕರೊಬ್ಬರು ನೀಡಿದ ದೂರನ್ನು ಅಧರಿಸಿ ಲೋಕಸಭೆಯ ಅರ್ಜಿಗಳ ಸಮಿತಿಯು ಕನಿಷ್ಠ ಮೊತ್ತ ಇಲ್ಲವೆಂಬ ಕಾರಣಕ್ಕೆ ಬ್ಯಾಂಕ್ಗಳು ದಂಡ ವಿಧಿಸದಂತೆ ಶಿಫಾರಸು ಮಾಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದೆ. ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿ ದರ ನೀಡಬೇಕು ಎಂದೂ ಅದು ಹೇಳಿದೆ.
ಗ್ರಾಹಕರ ಠೇವಣಿಯ ಹಣದಿಂದಲೇ ಸಾವಿರಾರು ಕೋಟಿ ರೂ. ವ್ಯವಹಾರ ನಡೆಸಿ ಲಾಭಗಳಿಸುವ ಬ್ಯಾಂಕ್ಗಳು ಉಳಿತಾಯ ಖಾತೆದಾರರು ಬ್ಯಾಂಕಿನಲ್ಲಿಟ್ಟಿರುವ ಹಣಕ್ಕೆ ಹೆಚ್ಚು ಬಡ್ಡಿ ನೀಡಬೇಕು ಹಾಗೂ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡವಿಧಿಸಬಾರದು ಎಂದು ಆರ್ಬಿಐ ಆದೇಶ ಹೊರಡಿಸುವ ಮೂಲಕ ಗ್ರಾಹಕರ ಹಿತ ಕಾಪಾಡ ಬೇಕಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…