Andolana originals

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ ಸಾಲಿನಲ್ಲೇ ೪,೦೮೭ ಕೋಟಿ ರೂ. ದಂಡ ವಸೂಲಿ ಮಾಡಿರುವುದು ವರದಿಯಾಗಿದೆ.

ಮಹಿಳೆಯೊಬ್ಬರ ಉಳಿತಾಯ ಖಾತೆಗೆ ಜಮೆಯಾದ ಮನ್ರೇಗಾದ ಕೂಲಿ ಹಣವಾದ ೫೦೦ ರೂ.ಗಳಲ್ಲಿ ೪೪೦ ರೂ. ಕಡಿತಗೊಳಿಸಿ ದಂಡ ವಸೂಲಿ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಬಡ ಜನರ ದಿನದ ದುಡಿಮೆಯ ಹಣವನ್ನು ದಂಡದ ರೂಪದಲ್ಲಿ ಪಡೆದರೆ ಜೀವನ ನಿರ್ವ ಹಣೆ ಹೇಗೆ ಮಾಡುವುದು ಎಂಬ ಪ್ರಶ್ನೆ ಕಾಡುತ್ತದೆ.

ಉಳಿತಾಯ ಖಾತೆಯಲ್ಲಿರುವ ಹಣಕ್ಕೆ ಈ ಮೊದಲು ಶೇ.೪ ಬಡ್ಡಿ ನೀಡುತ್ತಿದ್ದ ಬ್ಯಾಂಕ್‌ಗಳು ಈಗ ಬಡ್ಡಿಯ ಮೊತ್ತವನ್ನು ಶೇ. ೨.೫ ಬಡ್ಡಿ ನೀಡುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಆರ್‌ಬಿಐ ಗ್ರಾಕರಿಗೆ ದಂಡ ವಿಧಿಸುತ್ತಿರುವ ಬ್ಯಾಂಕ್‌ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ಗ್ರಾಹಕರೊಬ್ಬರು ನೀಡಿದ ದೂರನ್ನು ಅಧರಿಸಿ ಲೋಕಸಭೆಯ ಅರ್ಜಿಗಳ ಸಮಿತಿಯು ಕನಿಷ್ಠ ಮೊತ್ತ ಇಲ್ಲವೆಂಬ ಕಾರಣಕ್ಕೆ ಬ್ಯಾಂಕ್‌ಗಳು ದಂಡ ವಿಧಿಸದಂತೆ ಶಿಫಾರಸು ಮಾಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದೆ. ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿ ದರ ನೀಡಬೇಕು ಎಂದೂ ಅದು ಹೇಳಿದೆ.

ಗ್ರಾಹಕರ ಠೇವಣಿಯ ಹಣದಿಂದಲೇ ಸಾವಿರಾರು ಕೋಟಿ ರೂ. ವ್ಯವಹಾರ ನಡೆಸಿ ಲಾಭಗಳಿಸುವ ಬ್ಯಾಂಕ್‌ಗಳು ಉಳಿತಾಯ ಖಾತೆದಾರರು ಬ್ಯಾಂಕಿನಲ್ಲಿಟ್ಟಿರುವ ಹಣಕ್ಕೆ ಹೆಚ್ಚು ಬಡ್ಡಿ ನೀಡಬೇಕು ಹಾಗೂ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡವಿಧಿಸಬಾರದು ಎಂದು ಆರ್‌ಬಿಐ ಆದೇಶ ಹೊರಡಿಸುವ ಮೂಲಕ ಗ್ರಾಹಕರ ಹಿತ ಕಾಪಾಡ ಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

5 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

7 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

7 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

12 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

13 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

13 hours ago