ಓದುಗರ ಪತ್ರ
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ ಸಾಲಿನಲ್ಲೇ ೪,೦೮೭ ಕೋಟಿ ರೂ. ದಂಡ ವಸೂಲಿ ಮಾಡಿರುವುದು ವರದಿಯಾಗಿದೆ.
ಮಹಿಳೆಯೊಬ್ಬರ ಉಳಿತಾಯ ಖಾತೆಗೆ ಜಮೆಯಾದ ಮನ್ರೇಗಾದ ಕೂಲಿ ಹಣವಾದ ೫೦೦ ರೂ.ಗಳಲ್ಲಿ ೪೪೦ ರೂ. ಕಡಿತಗೊಳಿಸಿ ದಂಡ ವಸೂಲಿ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಬಡ ಜನರ ದಿನದ ದುಡಿಮೆಯ ಹಣವನ್ನು ದಂಡದ ರೂಪದಲ್ಲಿ ಪಡೆದರೆ ಜೀವನ ನಿರ್ವ ಹಣೆ ಹೇಗೆ ಮಾಡುವುದು ಎಂಬ ಪ್ರಶ್ನೆ ಕಾಡುತ್ತದೆ.
ಉಳಿತಾಯ ಖಾತೆಯಲ್ಲಿರುವ ಹಣಕ್ಕೆ ಈ ಮೊದಲು ಶೇ.೪ ಬಡ್ಡಿ ನೀಡುತ್ತಿದ್ದ ಬ್ಯಾಂಕ್ಗಳು ಈಗ ಬಡ್ಡಿಯ ಮೊತ್ತವನ್ನು ಶೇ. ೨.೫ ಬಡ್ಡಿ ನೀಡುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಆರ್ಬಿಐ ಗ್ರಾಕರಿಗೆ ದಂಡ ವಿಧಿಸುತ್ತಿರುವ ಬ್ಯಾಂಕ್ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ಗ್ರಾಹಕರೊಬ್ಬರು ನೀಡಿದ ದೂರನ್ನು ಅಧರಿಸಿ ಲೋಕಸಭೆಯ ಅರ್ಜಿಗಳ ಸಮಿತಿಯು ಕನಿಷ್ಠ ಮೊತ್ತ ಇಲ್ಲವೆಂಬ ಕಾರಣಕ್ಕೆ ಬ್ಯಾಂಕ್ಗಳು ದಂಡ ವಿಧಿಸದಂತೆ ಶಿಫಾರಸು ಮಾಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದೆ. ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿ ದರ ನೀಡಬೇಕು ಎಂದೂ ಅದು ಹೇಳಿದೆ.
ಗ್ರಾಹಕರ ಠೇವಣಿಯ ಹಣದಿಂದಲೇ ಸಾವಿರಾರು ಕೋಟಿ ರೂ. ವ್ಯವಹಾರ ನಡೆಸಿ ಲಾಭಗಳಿಸುವ ಬ್ಯಾಂಕ್ಗಳು ಉಳಿತಾಯ ಖಾತೆದಾರರು ಬ್ಯಾಂಕಿನಲ್ಲಿಟ್ಟಿರುವ ಹಣಕ್ಕೆ ಹೆಚ್ಚು ಬಡ್ಡಿ ನೀಡಬೇಕು ಹಾಗೂ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡವಿಧಿಸಬಾರದು ಎಂದು ಆರ್ಬಿಐ ಆದೇಶ ಹೊರಡಿಸುವ ಮೂಲಕ ಗ್ರಾಹಕರ ಹಿತ ಕಾಪಾಡ ಬೇಕಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…