Mysore
25
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

dgp murder case

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಸರ್ಕಾರಿ ಬ್ಯಾಂಕ್‌ಗಳ ಮೇಲೆ ವಿಶ್ವಾಸವಿಟ್ಟು ಗ್ರಾಹಕರು ಕೋಟ್ಯಂತರ ರೂ. ವ್ಯವಹಾರ ನಡೆಸುತ್ತಾರೆ. ಯಾರೋ ಕೆಲವರು ಮಾಡುವ ಕಾನೂನು ಬಾಹಿರ ಕೃತ್ಯಗಳಿಂದಾಗಿ ಗ್ರಾಹಕರು ಬ್ಯಾಂಕ್‌ಗಳ ಬಗ್ಗೆ ವಿಶ್ವಾಸ ಕಳೆದುಕೊಳ್ಳುವಂತಾಗಿದ್ದು, ಸಂಶಯದಿಂದ ನೋಡುವಂತಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸಂಬಂಧಪಟ್ಟವರು ಗ್ರಾಹಕರ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತಿರುವ ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಗ್ರಾಹಕರ ಹಿತ ಕಾಪಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

Tags:
error: Content is protected !!