ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ ಮೇಲೆ ಒಕ್ಕಣೆ ನಿಷೇಧಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ದಶಕಗಳ ಹಿಂದೆ ಸುಗ್ಗಿ ಕಾಲದಲ್ಲಿ ಫಸಲು ಒಕ್ಕಣೆ ಮಾಡಲು ಕಣಗಳನ್ನು ನಿರ್ಮಿಸಿ ರೋಣಗಲ್ಲು ಬಳಸಿ ಧಾನ್ಯಗಳನ್ನು ಬೇರ್ಪಡಿಸುತ್ತಿದ್ದರು. ಈಗ ಧಾನ್ಯ ಒಕ್ಕಣೆಗೆ ಯಂತ್ರಗಳು ಬಂದಿರುವುದರಿಂದ ರೈತರು ಕಣ ಸಂಸ್ಕೃತಿಯನ್ನೇ ಮರೆತಿದ್ದಾರೆ. ಹೆಚ್ಚು ಭೂಮಿ ಇರುವ ರೈತರು ಧಾನ್ಯ ಒಕ್ಕಣೆ ಯಂತ್ರಗಳನ್ನು ಬಾಡಿಗೆ ಪಡೆದು -ಸಲು ಕಟಾವಿನ ಜೊತೆಗೆ ಧಾನ್ಯವನ್ನೂ ಒಕ್ಕಣೆ ಮಾಡಿಸುತ್ತಾರೆ. ಸಣ್ಣ ರೈತರು ಒಕ್ಕಣೆ ಮಾಡಲು ಕಣವಿಲ್ಲದೆ ರಸ್ತೆಯ ಮೇಲೆ ಫಸಲನ್ನು ಹರಡುತ್ತಾರೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಸರ್ಕಾರ ರೈತರಿಗೆ ಸಾಮೂಹಿಕವಾಗಿ ಧಾನ್ಯ ಒಕ್ಕಣೆಗೆ ಕಣ ನಿರ್ಮಿಸಬೇಕು. ರಸ್ತೆಯ ಮೇಲೆ ಧಾನ್ಯ ಒಕ್ಕಣೆ ನಿಷೇಧಿಸುವ ಮೂಲಕ ಜೀವ ಹಾನಿಯನ್ನು ತಡೆಗಟ್ಟಬೇಕು.
-ಎ.ಎಸ್. ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…