ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ ಮೇಲೆ ಒಕ್ಕಣೆ ನಿಷೇಧಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ದಶಕಗಳ ಹಿಂದೆ ಸುಗ್ಗಿ ಕಾಲದಲ್ಲಿ ಫಸಲು ಒಕ್ಕಣೆ ಮಾಡಲು ಕಣಗಳನ್ನು ನಿರ್ಮಿಸಿ ರೋಣಗಲ್ಲು ಬಳಸಿ ಧಾನ್ಯಗಳನ್ನು ಬೇರ್ಪಡಿಸುತ್ತಿದ್ದರು. ಈಗ ಧಾನ್ಯ ಒಕ್ಕಣೆಗೆ ಯಂತ್ರಗಳು ಬಂದಿರುವುದರಿಂದ ರೈತರು ಕಣ ಸಂಸ್ಕೃತಿಯನ್ನೇ ಮರೆತಿದ್ದಾರೆ. ಹೆಚ್ಚು ಭೂಮಿ ಇರುವ ರೈತರು ಧಾನ್ಯ ಒಕ್ಕಣೆ ಯಂತ್ರಗಳನ್ನು ಬಾಡಿಗೆ ಪಡೆದು -ಸಲು ಕಟಾವಿನ ಜೊತೆಗೆ ಧಾನ್ಯವನ್ನೂ ಒಕ್ಕಣೆ ಮಾಡಿಸುತ್ತಾರೆ. ಸಣ್ಣ ರೈತರು ಒಕ್ಕಣೆ ಮಾಡಲು ಕಣವಿಲ್ಲದೆ ರಸ್ತೆಯ ಮೇಲೆ ಫಸಲನ್ನು ಹರಡುತ್ತಾರೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಸರ್ಕಾರ ರೈತರಿಗೆ ಸಾಮೂಹಿಕವಾಗಿ ಧಾನ್ಯ ಒಕ್ಕಣೆಗೆ ಕಣ ನಿರ್ಮಿಸಬೇಕು. ರಸ್ತೆಯ ಮೇಲೆ ಧಾನ್ಯ ಒಕ್ಕಣೆ ನಿಷೇಧಿಸುವ ಮೂಲಕ ಜೀವ ಹಾನಿಯನ್ನು ತಡೆಗಟ್ಟಬೇಕು.
-ಎ.ಎಸ್. ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…