ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ ಮೇಲೆ ಒಕ್ಕಣೆ ನಿಷೇಧಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ದಶಕಗಳ ಹಿಂದೆ ಸುಗ್ಗಿ ಕಾಲದಲ್ಲಿ ಫಸಲು ಒಕ್ಕಣೆ ಮಾಡಲು ಕಣಗಳನ್ನು ನಿರ್ಮಿಸಿ ರೋಣಗಲ್ಲು ಬಳಸಿ ಧಾನ್ಯಗಳನ್ನು ಬೇರ್ಪಡಿಸುತ್ತಿದ್ದರು. ಈಗ ಧಾನ್ಯ ಒಕ್ಕಣೆಗೆ ಯಂತ್ರಗಳು ಬಂದಿರುವುದರಿಂದ ರೈತರು ಕಣ ಸಂಸ್ಕೃತಿಯನ್ನೇ ಮರೆತಿದ್ದಾರೆ. ಹೆಚ್ಚು ಭೂಮಿ ಇರುವ ರೈತರು ಧಾನ್ಯ ಒಕ್ಕಣೆ ಯಂತ್ರಗಳನ್ನು ಬಾಡಿಗೆ ಪಡೆದು -ಸಲು ಕಟಾವಿನ ಜೊತೆಗೆ ಧಾನ್ಯವನ್ನೂ ಒಕ್ಕಣೆ ಮಾಡಿಸುತ್ತಾರೆ. ಸಣ್ಣ ರೈತರು ಒಕ್ಕಣೆ ಮಾಡಲು ಕಣವಿಲ್ಲದೆ ರಸ್ತೆಯ ಮೇಲೆ ಫಸಲನ್ನು ಹರಡುತ್ತಾರೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಸರ್ಕಾರ ರೈತರಿಗೆ ಸಾಮೂಹಿಕವಾಗಿ ಧಾನ್ಯ ಒಕ್ಕಣೆಗೆ ಕಣ ನಿರ್ಮಿಸಬೇಕು. ರಸ್ತೆಯ ಮೇಲೆ ಧಾನ್ಯ ಒಕ್ಕಣೆ ನಿಷೇಧಿಸುವ ಮೂಲಕ ಜೀವ ಹಾನಿಯನ್ನು ತಡೆಗಟ್ಟಬೇಕು.
-ಎ.ಎಸ್. ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…