ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದೊಳಗಿರುವ ಅಂಚೆ ಕಚೇರಿ ಮತ್ತು ಗಣಕಯಂತ್ರ ವಿಭಾಗದ ಸಮೀಪ ಇರುವ ರಸ್ತೆ ಮಧ್ಯೆ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳನ್ನು ಇಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿರುವ ಕೆಲವು ವಿದ್ಯಾರ್ಥಿಗಳು, ಮುಂಜಾನೆ ಮತ್ತು ಮುಸ್ಸಂಜೆಯ ವೇಳೆಯಲ್ಲಿ ಗಂಗೋತ್ರಿಯಲ್ಲಿ ವಾಯುವಿಹಾರಕ್ಕೆ ಬರುವವರು ಬಿಸ್ಕೆಟ್ ಮೊದಲಾದ ತಿನಿಸುಗಳನ್ನು ತಿಂದು ಪ್ಲಾಸ್ಟಿಕ್ ಕವರ್ಗಳನ್ನು ಬ್ಯಾರಿಕೇಡ್ಗಳ ಮೇಲೆ ಇಡುತ್ತಿರುವುದರಿಂದ ಕಸ ಸಂಗ್ರಹವಾಗಿ ಅಸಹ್ಯವಾಗಿ ಕಾಣುತ್ತಿವೆ.
ದಸರಾ ಮಹೋತ್ಸವದ ನಿಮಿತ್ತ ಮಾನಸಗಂಗೋತ್ರಿಯಲ್ಲಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಜನರನ್ನು ನಿಯಂತ್ರಿಸಲು ಈ ಬ್ಯಾರಿಕೇಡ್ಗಳನ್ನು ತರಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಪೊಲೀಸ್ ಇಲಾಖೆಯವರು ತೆಗೆದುಕೊಂಡು ಹೋಗದೇ ಎಲ್ಲೆಂದರಲ್ಲಿ ಬಿಟ್ಟಿರುವುದರಿಂದ ದುರ್ಬಳಕೆಯಾಗುತ್ತಿವೆ. ಪೊಲೀಸ್ ಇಲಾಖೆಯವರು ಕೂಡಲೇ ಮಾನಸಗಂಗೋತ್ರಿಯಲ್ಲಿರುವ ಬ್ಯಾರಿಕೇಡ್ಗಳನ್ನು ತೆಗೆದುಕೊಂಡು ಹೋಗಿ ಅಗತ್ಯವಿರುವ ಕಡೆ ಬಳಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…