ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ ಮುನ್ನ ೮ ಗಂಟೆಗಳ ಒಳಗಾಗಿ ಟಿಕೆಟ್ ರದ್ದುಮಾಡಿದ್ದಲ್ಲಿ ಯಾವುದೇ ಮರುಪಾವತಿ ಇರುವುದಿಲ್ಲ. ೮ ರಿಂದ ೨೪ ಗಂಟೆಗಳ ಒಳಗೆ ಟಿಕೆಟ್ ರದ್ದು ಮಾಡಿದಲ್ಲಿ ಟಿಕೆಟ್ಗೆ ಪಾವತಿಸಿರುವ ಮೊತ್ತಕ್ಕೆ ಅನುಗುಣವಾಗಿ ಶೇ.೫೦ರಷ್ಟು ಮರುಪಾವತಿ ಮಾಡಲಾಗುತ್ತದೆ. ೨೪ ರಿಂದ ೭೨ ಗಂಟೆಗಳ ಒಳಗೆ ಟಿಕೆಟ್ ರದ್ದಾದರೆ ಪಾವತಿಸಿದ ಮೊತ್ತಕ್ಕೆ ಶೇ. ೨೫ರಷ್ಟು ಕಡಿತಗೊಳಿಸಿ, ಶೇ.೭೫ರಷ್ಟು ಮರುಪಾವತಿಸಲಾಗುತ್ತದೆ.
೭೨ ಗಂಟೆಗಳಿಗಿಂತ ಮೊದಲು ಟಿಕೆಟ್ ರದ್ದಾದರೆ ಟಿಕೆಟ್ಗೆ ಪಾವತಿಸಿದ ಮೊತ್ತವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬಹುದಾಗಿದೆ. ಇದರ ಜೊತೆಗೆ ರೈಲು ನಿರ್ಗಮನಕ್ಕೆ ೩೦ ನಿಮಿಷಗಳವರೆಗೆ ಬೋರ್ಡಿಂಗ್ ಸ್ಟೇಷನ್ ಬದಲಾಯಿಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ.
-ನಾಗೇಶ್ ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…