ಓದುಗರ ಪತ್ರ
ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ ಇಲ್ಲವೆಂದರೆ ವೈದ್ಯರ ಹತ್ತಿರ ಕರೆದುಕೊಂಡು ಹೋಗುತ್ತಾರೆ.
ವೈದ್ಯರು ಕೊಟ್ಟ ಸಲಹೆ ಚೀಟಿಯಿಂದ ಔಷಧಿಗಳನ್ನು ಖರೀದಿಸುತ್ತಾರೆ. ಆದರೆ ಔಷಧಿಯೇ ಅಡ್ಡ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾದರೆ ಮಕ್ಕಳ ಆರೋಗ್ಯದ ಕುರಿತು ಯಾರ ಬಳಿ ಸಲಹೆ ಪಡೆಯಬೇಕು, ಯಾವ ಔಷಧಿ ನೀಡಬೇಕು ಎನ್ನುವಂತಾಗುತ್ತದೆ. ಔಷಧಿ ಕಂಪೆನಿಗಳು ಮಾರುಕಟ್ಟೆಗೆ ಔಷಧ ಬಿಡುಗಡೆ ಮಾಡುವ ಮುನ್ನ ಪರೀಕ್ಷೆ ನಡೆಸಬೇಕು. ಮತ್ತೊಮ್ಮೆ ಇಂತಹ ಅನಾಹುತಗಳು ಜರುಗುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸುವುದು ಅಗತ್ಯ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…