Andolana originals

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜನರು ಎಚ್ಚರ ವಹಿಸುವುದು ಅಗತ್ಯವಾಗಿದೆ. ಪ್ರಮುಖವಾಗಿ ಗ್ರಾಮೀಣ ಭಾಗಗಳಲ್ಲಿ ರೈತರು ಭತ್ತದ ಹುಲ್ಲು, ಸಿರಿಧಾನ್ಯಗಳ ಹುಲ್ಲನ್ನು ಜಾನುವಾರುಗಳಿಗಾಗಿ ಸಂಗ್ರಹ ಮಾಡಿರುತ್ತಾರೆ. ಇಂತಹ ಪ್ರದೇಶಗಳಲ್ಲಿ ಬೀಡಿ, ಸಿಗರೇಟು ಸೇದುವವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ. ಧೂಮಪಾನ ಮಾಡಿ ಉಳಿದ ಭಾಗ ಮತ್ತು ಬೆಂಕಿಕಡ್ಡಿಯನ್ನು ಕಷ್ಟ ಪಟ್ಟು ರೈತ ಸಂಗ್ರಹಿಸಿ ಇಟ್ಟಿರುವ ಹುಲ್ಲಿನ ಮೆದೆಗಳಿರುವ ಕಡೆ ಬೀಸಾಡುವಾಗ ಬೀಡಿ, ಸಿಗರೇಟು ಮತ್ತು ಬೆಂಕಿ ಕಡ್ಡಿಯಲ್ಲಿನ ಬೆಂಕಿಯನ್ನು ಸಂಪೂರ್ಣವಾಗಿ ಹಾರಿಸಿ ಖಾಲಿ ಜಾಗದಲ್ಲಿ ಹಾಕಬೇಕು. ಬೇಸಿಗೆಯಲ್ಲಿ ಬಿಸಿಲಿನ ತಾಪಮಾನಕ್ಕೆ ಹೆಚ್ಚು ಒಣಗುವ ಮರ ಗಿಡಗಳು, ಹುಲ್ಲು, ಪೇಪರ್ ಮತ್ತು ಪ್ಲಾಸ್ಟಿಕ್ ಕವರ್ ಗಳಿಗೆ ಸ್ವಲ್ಪ ಬೆಂಕಿಯ ಕಿಡಿ ತಾಗಿದರೂ ಬೆಂಕಿ ಹೊತ್ತಿಕೊಂಡು ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸಿ, ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳು ಹೆಚ್ಚು. ಹಾಗಾಗಿ ಸಾರ್ವಜನಿಕರು ಪರಿಸರ ಸಂರಕ್ಷಣೆ ಮತ್ತು ಕಾಡಿನ ರಕ್ಷಣೆಯ ಬಗ್ಗೆ ಎಚ್ಚರ ವಹಿಸುವುದು ಅಗತ್ಯ.ಜೊತೆಗೆ ನೀರನ್ನು ವ್ಯರ್ಥ ಮಾಡದೆ ಮಿತ ಪ್ರಮಾಣದಲ್ಲಿ ಬಳಸಬೇಕು. ಈಗಾಗಲೇ ರಾಜ್ಯದ ಅನೇಕ ಕೆರೆ- ಕಟ್ಟೆಗಳಲ್ಲಿ ನೀರು ಇಂಗಿ ಹೋಗಿ,ನೀರಿನ ಅಭಾವ ಸೃಷ್ಟಿಯಾಗಿದ್ದು, ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರು ಸಿಗುವುದೇ ದುರ್ಲಭವಾಗಿದೆ. ಮತ್ತೊಂದೆಡೆ ಬಿಸಿಲ ಝಳ ಹೆಚ್ಚುತ್ತಿದೆ. ಮಳೆ ಬರುವುದು ತಡವಾದರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಬಿಗಡಾಯಿಸಬಹುದು. ಆದ್ದರಿಂದ ಬೇಸಿಗೆಯಲ್ಲಿ ಪರಿಸರ, ವನ್ಯಜೀವಿಗಳು, ಪ್ರಾಣಿ ಪಕ್ಷಿಗಳ ಸುರಕ್ಷತೆ, ಗಿಡ ಮರಗಳ ಸಂರಕ್ಷಣೆ, ನೀರು, ಆಹಾರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರ ಪಾತ್ರ ಇಂತಹ ಸಂದರ್ಭಗಳಲ್ಲಿ ಅತ್ಯಂತ ಅಗತ್ಯವಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

26 mins ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

3 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

4 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

6 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

7 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

8 hours ago