ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ ಗುತ್ತಿಗೆ ಪಡೆದವರು ಮುಖ್ಯ ರಸ್ತೆಗಳಲ್ಲಿ ಭಾರೀ ಗುಂಡಿಗಳನ್ನು ತೆಗೆದು ಪೈಪ್ಗಳನ್ನು ರಸ್ತೆಯಲ್ಲಿ ಹಾಕಿದ್ದು, ಗುಂಡಿಗಳನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಕುವೆಂಪು ನಗರದ ಎನ್ -ಬ್ಲಾಕ್ನ ಮುಖ್ಯ ರಸ್ತೆಯಲ್ಲಿರುವ ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದ ಪಕ್ಕದಲ್ಲಿ ಎರಡು ತಿಂಗಳ ಹಿಂದಿನಿಂದಲೂ ಸೆಸ್ಕ್ ಭೂಗತ ಕೇಬಲ್ ಅಳವಡಿಕೆಗಾಗಿ ಪೈಪ್ಗಳನ್ನು ರಸ್ತೆಯ ಬದಿಯಲ್ಲಿ ಹಾಗೆಯೇ ಬಿಟ್ಟಿದ್ದು, ರಾತ್ರಿ ವೇಳೆ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯಾಗಿದೆ. ಯುಜಿ ಕೇಬಲ್ ಅಳವಡಿಕೆಗೆ ತೆಗೆದಿರುವ ಗುಂಡಿಗಳ ಅಕ್ಕಪಕ್ಕದಲ್ಲಿ ಕೆಂಪು ಬಣ್ಣದ ಟೇಪ್ಗಳನ್ನು ಹಾಕುವುದು ಅಗತ್ಯ. ಇಲ್ಲದಿದ್ದರೆ ಅಪಘಾತ ಸಂಭವಿಸಿ ಜೀವಹಾನಿಯಾದರೆ ಅದಕ್ಕೆ ಸೆಸ್ಕ್ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು



