ಓದುಗರ ಪತ್ರ
ಮಂಡ್ಯದಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಬೇರೆ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ವಿವಾದದ ಬಗ್ಗೆ ‘ಅಂದೋಲನ ದಿನಪತ್ರಿಕೆಯ ಅ.17ರ ಸಂಚಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಪತ್ರವೊಂದು ಪ್ರಕಟವಾಗಿತ್ತು.
ಸಮ್ಮೇಳನಾಧ್ಯಕ್ಷರ ಆಯ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಬೇರೆ ಕ್ಷೇತ್ರಗಳ ಸಾಧಕರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದಾದರೆ ಆ ಪಟ್ಟಕ್ಕಾಗಿ ಪೈಪೋಟಿ ಹೆಚ್ಚಾಗಬಹುದು. ಪ್ರಭಾವಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ ಸಮ್ಮೇಳನಾಧ್ಯಕ್ಷರಾಗಬಹುದು. ಆದ್ದರಿಂದ ಸಾಹಿತ್ಯೇತರ ಕ್ಷೇತ್ರದವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಸಮಂಜಸವಲ್ಲ. ಇವರಿಗೆ ಬೇರೆ ಬೇರೆ ವೇದಿಕೆಗಳಿವೆ. ಹಾಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಒಳಿತು.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…