Andolana originals

ಓದುಗರ ಪತ್ರ: ಕಾಡ್ಗಿಚ್ಚಿನ ಬಗ್ಗೆ ಜಾಗೃತರಾಗಿರಿ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಬೇಸಿಗೆಯ ಆರಂಭದಲ್ಲಿಯೇ ಅಗ್ನಿ ಅವಘಡ ಸಂಭವಿಸಿದ್ದು, ಇನ್ನು ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮತ್ತಷ್ಟು ಕಠಿಣವಾಗಲಿದೆ. ಅರಣ್ಯ ಇಲಾಖೆಯು ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಎಚ್ಚತ್ತುಕೊಂಡು, ಉಳಿದ ಭಾಗದ ಅರಣ್ಯ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಡಬೇಕು. ರಾಜ್ಯದಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಅಭಯಾರಣ್ಯ, ಬಿಳಿಗಿರಿರಂಗನ ಬೆಟ್ಟ, ನಾಗರಹೊಳೆ, ಮಲೆ ಮಹದೇಶ್ವರಸ್ವಾಮಿ ಬೆಟ್ಟ ಸೇರಿದಂತೆ ಕೊಡಗು, ಉಡುಪಿ, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು ಭಾಗಗಳಲ್ಲಿನ ಅರಣ್ಯ ಪ್ರದೇಶಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಳ್ಳಬೇಕು.

ಅಗ್ನಿ ಅವಘಡ ಆಕಸ್ಮಿಕವಾಗಿ ಸಂಭವಿಸುವುದಕ್ಕಿಂತ ಮಾನವನಿಂದ ಸಂಭವಿಸುವುದೇ ಹೆಚ್ಚು. ಹೀಗಾಗಿ ಅರಣ್ಯ ಪ್ರದೇಶಗಳ ಸಮೀಪ ಬೆಂಕಿ ಹಾಕದಂತೆ, ಯಾರೂ ಧೂಮಪಾನ ಮಾಡದಂತೆ ನೋಡಿಕೊಳ್ಳಬೇಕು. ಜತೆಗೆ ಪ್ಲಾಸ್ಟಿಕ್, ಗಾಜಿನ ಬಾಟಲಿಗಳು ಕಾಡನ್ನು ಸೇರದಂತೆ ಎಚ್ಚರವಹಿಸಬೇಕು. ಸಾರ್ವಜನಿಕರೂ ಕೂಡ ಕಾಡನ್ನು ಬೆಂಕಿಯಿಂದ ರಕ್ಷಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದು ಭಾವಿಸದೆ, ಇದು ನಮ್ಮೆಲ್ಲರ ಹೊಣೆ ಎಂದುಕೊಂಡು ಅರಣ್ಯ ಇಲಾಖೆಯ ನಿಯಮಕ್ಕೆ ಬದ್ಧರಾಗಿ ಕಾಡಿನ ರಕ್ಷಣೆಗೆ ಸಹಕರಿಸಬೇಕು.

-ನಾಗೇಶ್, ಮಾನಸ ಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

31 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago