ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಬೇಸಿಗೆಯ ಆರಂಭದಲ್ಲಿಯೇ ಅಗ್ನಿ ಅವಘಡ ಸಂಭವಿಸಿದ್ದು, ಇನ್ನು ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮತ್ತಷ್ಟು ಕಠಿಣವಾಗಲಿದೆ. ಅರಣ್ಯ ಇಲಾಖೆಯು ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಎಚ್ಚತ್ತುಕೊಂಡು, ಉಳಿದ ಭಾಗದ ಅರಣ್ಯ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಡಬೇಕು. ರಾಜ್ಯದಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಅಭಯಾರಣ್ಯ, ಬಿಳಿಗಿರಿರಂಗನ ಬೆಟ್ಟ, ನಾಗರಹೊಳೆ, ಮಲೆ ಮಹದೇಶ್ವರಸ್ವಾಮಿ ಬೆಟ್ಟ ಸೇರಿದಂತೆ ಕೊಡಗು, ಉಡುಪಿ, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು ಭಾಗಗಳಲ್ಲಿನ ಅರಣ್ಯ ಪ್ರದೇಶಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಳ್ಳಬೇಕು.
ಅಗ್ನಿ ಅವಘಡ ಆಕಸ್ಮಿಕವಾಗಿ ಸಂಭವಿಸುವುದಕ್ಕಿಂತ ಮಾನವನಿಂದ ಸಂಭವಿಸುವುದೇ ಹೆಚ್ಚು. ಹೀಗಾಗಿ ಅರಣ್ಯ ಪ್ರದೇಶಗಳ ಸಮೀಪ ಬೆಂಕಿ ಹಾಕದಂತೆ, ಯಾರೂ ಧೂಮಪಾನ ಮಾಡದಂತೆ ನೋಡಿಕೊಳ್ಳಬೇಕು. ಜತೆಗೆ ಪ್ಲಾಸ್ಟಿಕ್, ಗಾಜಿನ ಬಾಟಲಿಗಳು ಕಾಡನ್ನು ಸೇರದಂತೆ ಎಚ್ಚರವಹಿಸಬೇಕು. ಸಾರ್ವಜನಿಕರೂ ಕೂಡ ಕಾಡನ್ನು ಬೆಂಕಿಯಿಂದ ರಕ್ಷಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದು ಭಾವಿಸದೆ, ಇದು ನಮ್ಮೆಲ್ಲರ ಹೊಣೆ ಎಂದುಕೊಂಡು ಅರಣ್ಯ ಇಲಾಖೆಯ ನಿಯಮಕ್ಕೆ ಬದ್ಧರಾಗಿ ಕಾಡಿನ ರಕ್ಷಣೆಗೆ ಸಹಕರಿಸಬೇಕು.
-ನಾಗೇಶ್, ಮಾನಸ ಗಂಗೋತ್ರಿ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…